ಬಡ್ತಿ ಸಿಕ್ಕ ಮರುದಿನವೇ ನಿವೃತ್ತಿ..! ಚಿತ್ರದುರ್ಗದ ಅಧಿಕಾರಿಯ ಅಪರೂಪದ ಸೇವಾ ಪಯಣ

ಚಿತ್ರದುರ್ಗ: ಸರ್ಕಾರಿ ಸೇವೆಯಲ್ಲಿ ಬಡ್ತಿ ಎನ್ನುವುದು ಪ್ರತಿಯೊಬ್ಬ ಉದ್ಯೋಗಿಯ ಕನಸು. ವರ್ಷಗಳ ಶ್ರಮ, ಸೇವಾ ಹಿರಿತನ ಮತ್ತು ನಿಷ್ಠೆಗೆ ಸಿಗುವ ಮಾನ್ಯತೆಯೇ ಪದೋನ್ನತಿ. ಆದರೆ ಆ ಬಹುನಿರೀಕ್ಷಿತ ಬಡ್ತಿ ದೊರೆತ ಮರುದಿನವೇ ನಿವೃತ್ತಿಯಾಗಬೇಕಾದರೆ ಅದು ಸಂತಸದ ಜೊತೆಗೆ ಒಂದು ರೀತಿಯ ಬೇಸರವನ್ನೂ ಉಂಟುಮಾಡುತ್ತದೆ. ಇಂತಹ ಅಪರೂಪದ ಘಟನೆ ಚಿತ್ರದುರ್ಗ ಜಿಲ್ಲೆಯ ಸರ್ಕಾರಿ ಸೇವೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸ್ಕಿಲ್ ಟ್ರೇಡ್ಸ್ಮನ್ (ವೃಂದ–ಸಿ) ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈ.ಕೆ. ಮಲ್ಲಪ್ಪ ಅವರಿಗೆ ಹಲವು […]
ಎಸ್ಐಆರ್ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ಅರ್ಹ ಮತದಾರರು ವಂಚಿತರಾಗದಂತೆ ಎಚ್ಚರ ವಹಿಸಿ ಬೂತ್ ಮಟ್ಟದ ಏಜೆಂಟರು ಜವಾಬ್ದಾರಿಯಿಂದ ಕೆಲಸ ಮಾಡಿ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಜೂ.03:ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಬೂತ್ ಮಟ್ಟದ ಏಜೆಂಟರುಉ (ಬಿಎಲ್ಒ) ಸಂಪೂರ್ಣ ಮಾಹಿತಿ ಹೊಂದುವುದು ಅಗತ್ಯವಾಗಿದ್ದು, ತಮಗೆ ನೀಡಿರುವ ಜವಾಬ್ದಾರಿ ಅರಿತು ನಿಷ್ಠೆಯಿಂದ ಕೆಲಸ ಮಾಡಬೇಕು. ಜಿಲ್ಲೆಯಲ್ಲಿ ಯಾವುದೇ ಒಬ್ಬ ಅರ್ಹ ಮತದಾರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಬೂತ್ ಮಟ್ಟದ ಏಜೆಂಟರಿಗೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ ಕುರಿತು ಮಾನ್ಯತಾ ಪಡೆದ ರಾಜಕೀಯ […]
ತೈಲ ಕಂಪನಿಗಳ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಜೂ.03:ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದಾಸ್ತಾನು ಸಮರ್ಪಕವಾಗಿದ್ದು, ಯಾವುದೇ ರೀತಿಯ ಇಂಧನ ಕೊರತೆ ಇಲ್ಲ. ಇಂಧನ ಪೂರೈಕೆ ಎಂದಿನಂತೆ ಸಹಜವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯಿಲ್ ಕಂಪನಿಗಳ ಅಧಿಕಾರಿಗಳು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇಂಧನದ ಅನಧಿಕೃತ ದಾಸ್ತಾನು ಇರಿಸುವುದು ಮತ್ತು ತಾತ್ಕಾಲಿಕ ಕೊರತೆ ಸೃಷ್ಠಿಸುವಂತಹ ಪ್ರಕರಣ ಕಂಡುಬಂದಲ್ಲಿ ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಸಂಬಂಧಪಟ್ಟ ನಿಯಮಗಳಡಿ […]
ಹಾಲು ಉತ್ಪಾದಕರೇ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು. ಹಾಲು ಉತ್ಪಾದನೆಯಲ್ಲಿ ರಾಜ್ಯ ದ್ವಿತೀಯ.ಬಿ.ಸಿ ಸಂಜೀವ ಮೂರ್ತಿ

ವರದಿ:- ಅರುಣ್ ಕುಮಾರ್.ಎಸ್ (ದೊಡ್ಡ ಉಳ್ಳಾರ್ತಿ) ಪ್ರತಿನಿತ್ಯ ಒಂದು ಕೋಟಿ ಲೀಟರ್ ಗೂ ಅಧಿಕ ಹಾಲು ಹಾಗೂ ಉತ್ಪಾದಿಸುವ ಕರ್ನಾಟಕ ಕ್ಷೀರ ಉತ್ಪಾದನೆಯಲ್ಲಿ ದೇಶದಲ್ಲಿ 2ನೇ ಸ್ಥಾನದಲ್ಲಿದೆ ಎಂದು ಶಿಮುಲ್ ನಿರ್ದೇಶಕ ಬಿ.ಸಿ ಸಂಜೀವಮೂರ್ತಿ ಹೇಳಿದರು. ನಗರದ ನಂದಿನಿ ಪಾರ್ಲರ್ ನಲ್ಲಿ ಶಿವಮೊಗ್ಗ ಹಾಲು ಒಕ್ಕೂಟದಿಂದ ಸೋಮವಾರ ಆಯೋಜಿಸಿದ್ದ ವಿಶ್ವ ಹಾಲು ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ ಜಗತ್ತಿನ ಒಟ್ಟಾರೆ ಉತ್ಪಾದನೆಯಲ್ಲಿ ಶೇ.27ರಷ್ಟು ಹಾಲು ಭಾರತದಲ್ಲಿ ಉತ್ಪಾದನೆಯಾಗುತ್ತದೆ. ದೇಶದಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದು ಕರ್ನಾಟಕ 2ನೇ ಸ್ಥಾನ ಪಡೆದಿದೆ, […]
ಸರ್ಕಾರ ಹಾಗೂ ಶಿಮುಲ್ ವತಿಯಿಂದ ದೊರೆಯುವ ಸೌಲಭ್ಯಗಳನ್ನು ಪ್ರತಿಯೊಬ್ಬ ಹೈನುಗಾರ ರೈತನಿಗೂ ತಲುಪಿಸುವ ಜವಾಬ್ದಾರಿ ಕಾರ್ಯದರ್ಶಿಗಳ ಮೇಲಿದೆ – ಬಿ.ಸಿ ಸಂಜೀವಮೂರ್ತಿ

ವರದಿ :- ಅರುಣ್ ಕುಮಾರ್. ಎಸ್ (ದೊಡ್ಡ ಉಳ್ಳಾರ್ತಿ) ಚಳ್ಳಕೆರೆ, ಜೂನ್ 2 :- ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಮೇ ತಿಂಗಳಿನ ಕಾರ್ಯದರ್ಶಿಗಳ ಪ್ರಗತಿಪರಿಶೀಲನಾ ಸಭೆಯು ಚಳ್ಳಕೆರೆಯ ನಂದಿನಿ ಉಪ ಕಚೇರಿಯ ಕುರಿಯನ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಇತ್ತೀಚೆಗೆ ನಿಧನರಾದ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಿ, ಶ್ರದ್ಧಾಂಜಲಿ ಅರ್ಪಿಸಲಾಯಿತು.ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿ.ಸಿ. ಸಂಜೀವಮೂರ್ತಿ.ಹಾಲು ಉತ್ಪಾದಕರ ಸಹಕಾರ ಸಂಘಗಳು ಗ್ರಾಮೀಣ ಆರ್ಥಿಕ ವ್ಯವಸ್ಥೆಯ ಬೆನ್ನೆಲುಬಾಗಿದ್ದು, […]
ಚರಂಡಿ ಅವ್ಯವಸ್ಥೆಗೆ ಕೆರೆಯಾದ ರಸ್ತೆ : ಗ್ರಾಮಸ್ಥರ ಗೋಳು ಕೇಳುವವರು ಯಾರು?

ವರದಿ:- ಅರುಣ್ ಕುಮಾರ್.ಎಸ್(ದೊಡ್ಡ ಉಳ್ಳಾರ್ತಿ) ಚಳ್ಳಕೆರೆ :- ನಗರಂಗೆರೆ ಗ್ರಾಮದ ಬೋವಿ ಕಾಲೋನಿಯ ಬಾಬು ಅವರ ಮನೆ ಸಮೀಪ ಮಳೆ ನೀರು ರಸ್ತೆಯ ಮೇಲೆಯೇ ನಿಂತು ಕೆರೆಯಂತಾಗಿರುವ ಪರಿಣಾಮ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ. ಸೂಕ್ತ ಚರಂಡಿ ವ್ಯವಸ್ಥೆಯ ಕೊರತೆಯಿಂದ ಮಳೆ ನೀರು ಹರಿದು ಹೋಗದೆ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು,ಮಳೆಯ ನೀರು ಮನೆಗೆ ನುಗ್ಗುತ್ತಿವೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬೋವಿ ಕಾಲೋನಿಯಿಂದ ಮುಖ್ಯ ಚರಂಡಿಗೆ ಸಂಪರ್ಕ ಕಲ್ಪಿಸುವ ವ್ಯವಸ್ಥೆ ಇಲ್ಲದ ಕಾರಣ […]