ಸಾವಯವ ಕೃಷಿ ಅಳವಡಿಕೆ ಇಂದಿನ ಅನಿವಾರ್ಯ -ಸಹಾಯಕ ಕೃಷಿ ನಿರ್ದೇಶಕ ಆರ್.ರಜನಿಕಾಂತ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್29:ಮುಂದಿನ ಪೀಳಿಗೆಗೆ ಫಲವತ್ತಾದ ಮಣ್ಣು ಮತ್ತು ಆರೋಗ್ಯಕರ ಪರಿಸರ ಉಳಿಸಿಕೊಡಲು ರೈತರು ಸಾವಯವ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು ಇಂದಿನ ಅನಿವಾರ್ಯತೆಯಾಗಿದೆ ಎಂದು ಬಬ್ಬೂರುಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನಿಕಾಂತ ತಿಳಿಸಿದರು.ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಈಚೆಗೆ ರಾಜ್ಯ ವಲಯ ಕೃಷಿ ಆಯುಕ್ತಾಲಯ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಆಸಕ್ತ ರೈತರಿಗಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ರೈತರಿಗೆ ಉತ್ತಮ ಪರಿಸರ ಮತ್ತು ಆರೋಗ್ಯಕ್ಕಾಗಿ ಔಷಧಿಯ ಸಸ್ಯಗಳು, […]
ಅಂತರಾಷ್ಟ್ರೀಯ ಎಂಎಸ್ಎಂಇ ದಿನಾಚರಣೆ ಅಂಗವಾಗಿ ಭಿತ್ತಿಪತ್ರ ಬಿಡುಗಡೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್29:ಭಾರತೀಯ ರಿಸರ್ವ್ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ಲೀಡ್ ಬ್ಯಾಂಕ್ ವತಿಯಿಂದ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಈಚೆಗೆ ನಡೆದ ಅಂತರಾಷ್ಟ್ರೀಯ ಎಂಎಸ್ಎಂಇ ದಿನಾಚರಣೆ ಅಂಗವಾಗಿ ಆರ್ಬಿಐ ವಿನ್ಯಾಸಗೊಳಿಸಿದ ಭಿತ್ತಿಪತ್ರಗಳನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಬಿಡುಗಡೆಗೊಳಿಸಿದರು.ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಎಂ.ಪಿ.ಪ್ರವೀಣ್ ಮಾತನಾಡಿ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ದೇಶದ ಆರ್ಥಿಕತೆಯ ಬೆನ್ನೆಲುಬು. ಉದ್ಯಮ್ ನೋಂದಣಿ ಮಾಡಿಕೊಂಡರೆ ಸರ್ಕಾರದ ಎಲ್ಲ ಯೋಜನೆಗಳ ಲಾಭ ಪಡೆಯಬಹುದು ಎಂದು ಮಾಹಿತಿ ನೀಡಿದ ಅವರು, ಈ […]
ಕಾಂಗ್ರೆಸ್ ಟಿಕೆಟ್ಗೆ ಆರ್. ಮಂಜುನಾಥ್ ಭರವಸೆ: “ನಾಯಕತ್ವ ನನ್ನನ್ನು ಕೈಹಿಡಿಯಲಿದೆ”

ಹಿರಿಯೂರು , ಮುಂಬರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ತಮಗೇ ದೊರೆಯುವ ವಿಶ್ವಾಸವಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆರ್. ಮಂಜುನಾಥ್ ತಿಳಿಸಿದರು. ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆ ಯಾರೂ ನಿರೀಕ್ಷಿಸದ ರಾಜಕೀಯ ಬೆಳವಣಿಗೆಯಾಗಿದ್ದು, ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷವನ್ನು ತಾಲೂಕು ಮಟ್ಟದಲ್ಲಿ ಸಂಘಟಿಸಿ ಬಲಪಡಿಸುವ ಕೆಲಸದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದೇನೆ ಎಂದು ಹೇಳಿದರು. 1994ರಲ್ಲಿ ಕಾಂಗ್ರೆಸ್ ಪಕ್ಷ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾಗ […]