ಒಂದೇ ಜಾತಿ, ಒಂದೇ ಧರ್ಮಕ್ಕೆ ಸೀಮಿತವಲ್ಲದ ಮಹಾ ಚಿಂತಕರು ಡಾ.ಬಿ.ಆರ್ ಅಂಬೇಡ್ಕರ್ ಮತ್ತು  ಬಸವಣ್ಣನವರು.ಬಿ.ಸಿ ಸಂಜೀವಮೂರ್ತಿ ಕರೆ

ಸಮಾನತೆ ಸಾರಿದ ಇಬ್ಬರು ಮಹಾನ್ ಚೇತನಗಳಿಗೆ ಭವ್ಯ ನಮನ: ಅಂಬೇಡ್ಕರ್–ವಿಶ್ವಗುರು ಬಸವಣ್ಣ ಜಯಂತಿ ಆಚರಣೆ”. ವರದಿ:- ಅರುಣ್ ಕುಮಾರ್. ಎಸ್ (ದೊಡ್ಡ ಉಳ್ಳಾರ್ತಿ) ಚಳ್ಳಕೆರೆ :- ಸಂವಿಧಾನ ಶಿಲ್ಪಿ, ಜಗತ್ತು ಕಂಡ ಮಹಾನ್ ಜ್ಞಾನಿ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ  ಜಯಂತಿ ಹಾಗೂ  ವಿಶ್ವಗುರು ಬಸವಣ್ಣನವರ 893 ನೇ ಜಯಂತಿ ಹಾಗೂ ದಿವಂಗತ ಡಿ.ಸುಧಾಕರ್ ರವರ ನುಡಿನಮನ ಕಾರ್ಯಕ್ರಮವನ್ನು  ಚಳ್ಳಕೆರೆ ತಾಲ್ಲೂಕಿನ ಲಕ್ಷ್ಮೀಪುರ  ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ನಗರಂಗೆರೆ ಗ್ರಾಮ ಪಂಚಾಯಿತಿ ಹಿತರಕ್ಷಣಾ ವೇದಿಕೆಮೂರ್ತಿ ಇಂಡಸ್ಟ್ರೀಸ್ ಅಂಡ್ ಡೆವೆಲಪ್ಪರ್ ಗ್ರೂಪ್ಸ್ […]

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಪರಿಸರ ಮಾಲಿನ್ಯಕ್ಕೆ ಕಡಿವಾಣ ಹಾಕಿ              -ಜಿಲ್ಲಾ ನ್ಯಾಯಾಧೀಶ ಜಿ.ಡಿ.ಮಹಾವರ್ಕರ್

ಚಿತ್ರದುರ್ಗ(ಕರ್ನಾಟಕ ವಾರ್ತೆ).ಜೂ.05:ಆಧುನಿಕ ಜೀವನಶೈಲಿಗೆ ಒಗ್ಗಿಕೊಂಡಿರುವ ನಾವು ಸ್ವಚ್ಛಂದ ಜೀವನ ನಡೆಸಲು ಪ್ರಯತ್ನಿಸುತ್ತಿದ್ದೇವೆಯೇ ಹೊರತು, ಅದರಿಂದ ಪರಿಸರದ ಮೇಲಾಗುತ್ತಿರುವ ಹಾನಿಯ ಬಗ್ಗೆ ಯೋಚಿಸುತ್ತಿಲ್ಲ. ನಮ್ಮ ಸ್ವಾರ್ಥಕ್ಕಾಗಿ ಪರಿಸರ ಹಾಳುಗೆಡವುತ್ತಿರುವುದು ಆತಂಕಕಾರಿ ಸಂಗತಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಡಿ. ಮಹಾವರ್ಕರ್ ಕಳವಳ ವ್ಯಕ್ತಪಡಿಸಿದರು.ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅರಣ್ಯ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ‘ವಿಶ್ವ ಪರಿಸರ ದಿನಾಚರಣೆ’ ಅಂಗವಾಗಿ ಸಸಿ ನೆಡುವ […]

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ “ನಿಸರ್ಗ ಚಾರಿಟೇಬಲ್ ಟ್ರಸ್ಟ್” ಹಾಗೂ” ಡಾ. ಬಿಆರ್ ಅಂಬೇಡ್ಕರ್ ಕ್ರೀಡೆ ಮತ್ತು ಸಾಂಸ್ಕೃತಿಕ ಸಂಘ ಮತ್ತು ಜೆ ಸಿ ಬೋಸ್ ಇಕೋ ಕ್ಲಬ್ ಇವರ ಸಂಯುತ್ತಾ ಆಶಯದಲ್ಲಿ ಪಾಲವ್ನಹಳ್ಳಿ ಗ್ರಾಮದ ಶಾಲಾ ಆವರಣದಲ್ಲಿ ಪರಿಸರ ಜಾಗೃತಿ ಮತ್ತು ಸಸಿ ನೆಡೆಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಮುಖ್ಯ ಅತಿಥಿಗಳಾಗಿ ಪಿಡಿಒ ಬಸವರಾಜ್ ಡಾ. ಬಿ ಆರ್ ಅಂಬೇಡ್ಕರ್ ಮತ್ತು ಸಾಂಸ್ಕೃತಿಕ ಸಂಘ ಹಾಗೂ ನಿಸರ್ಗ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರು ನಾಗರಾಜ್ ಟಿ ಅಪಾರ ಮುಖ್ಯ ಶಿಕ್ಷಕರಾದ ರಂಗ ದೇವ್, ವೆಂಕಟೇಶ್, M R ರಾಮಚಂದ್ರಪ್ಪ ನಾಗೇಂದ್ರಪ್ಪ ಚಿದಾನಂದ್ ಹಾಗೂ ಊರಿನ ಪ್ರಮುಖ ಮುಖಂಡರು ಉಪಸ್ಥಿತಿ ಇದ್ದರು

ಪರಿಸರವು ಮಾನವನ ಜೀವ ನಾಡಿ – ನವನೀತ (ಪಿ.ಡಿ.ಒ) ಕರೆ

ವರದಿ:- ಅರುಣ್ ಕುಮಾರ್. ಎಸ್ ( ದೊಡ್ಡ ಉಳ್ಳಾರ್ತಿ) ಚಳ್ಳಕೆರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ದೊಡ್ಡ ಉಳ್ಳಾರ್ತಿ ಗ್ರಾಮದ ಸರ್ಕಾರಿ  ಕನ್ನಡ ಮತ್ತು ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಹಮ್ಮಿಕೊಂಡಿದ್ದ ಹಸರೀಕರಣ ಹಾಗೂ ಗಿಡ ನೆಡುವ ಮೂಲಕ ಸಸಿಗೆ  ನೀರೆರೆದು ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವನೀತ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಪಿಡಿಒ ನವನೀತ ರವರು, ಪರಿಸರ ಸಂರಕ್ಷಣೆ ಇಂದಿನ ಅತ್ಯಂತ ಪ್ರಮುಖ ಅಗತ್ಯವಾಗಿದ್ದು, ಹಸಿರೀಕರಣದ ಜೊತೆಗೆ ಪ್ಲಾಸ್ಟಿಕ್ ನಿರ್ಮೂಲನೆಗೂ ಸಾರ್ವಜನಿಕರು […]

ಬಡ್ತಿ ಸಿಕ್ಕ ಮರುದಿನವೇ ನಿವೃತ್ತಿ..! ಚಿತ್ರದುರ್ಗದ ಅಧಿಕಾರಿಯ ಅಪರೂಪದ ಸೇವಾ ಪಯಣ

ಚಿತ್ರದುರ್ಗ: ಸರ್ಕಾರಿ ಸೇವೆಯಲ್ಲಿ ಬಡ್ತಿ ಎನ್ನುವುದು ಪ್ರತಿಯೊಬ್ಬ ಉದ್ಯೋಗಿಯ ಕನಸು. ವರ್ಷಗಳ ಶ್ರಮ, ಸೇವಾ ಹಿರಿತನ ಮತ್ತು ನಿಷ್ಠೆಗೆ ಸಿಗುವ ಮಾನ್ಯತೆಯೇ ಪದೋನ್ನತಿ. ಆದರೆ ಆ ಬಹುನಿರೀಕ್ಷಿತ ಬಡ್ತಿ ದೊರೆತ ಮರುದಿನವೇ ನಿವೃತ್ತಿಯಾಗಬೇಕಾದರೆ ಅದು ಸಂತಸದ ಜೊತೆಗೆ ಒಂದು ರೀತಿಯ ಬೇಸರವನ್ನೂ ಉಂಟುಮಾಡುತ್ತದೆ. ಇಂತಹ ಅಪರೂಪದ ಘಟನೆ ಚಿತ್ರದುರ್ಗ ಜಿಲ್ಲೆಯ ಸರ್ಕಾರಿ ಸೇವೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸ್ಕಿಲ್ ಟ್ರೇಡ್ಸ್‌ಮನ್ (ವೃಂದ–ಸಿ) ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈ.ಕೆ. ಮಲ್ಲಪ್ಪ ಅವರಿಗೆ ಹಲವು […]

ಎಸ್‍ಐಆರ್ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ಅರ್ಹ ಮತದಾರರು ವಂಚಿತರಾಗದಂತೆ ಎಚ್ಚರ ವಹಿಸಿ ಬೂತ್ ಮಟ್ಟದ ಏಜೆಂಟರು ಜವಾಬ್ದಾರಿಯಿಂದ ಕೆಲಸ ಮಾಡಿ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಜೂ.03:ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‍ಐಆರ್) ಕುರಿತು ಬೂತ್ ಮಟ್ಟದ ಏಜೆಂಟರುಉ (ಬಿಎಲ್‍ಒ) ಸಂಪೂರ್ಣ ಮಾಹಿತಿ ಹೊಂದುವುದು ಅಗತ್ಯವಾಗಿದ್ದು, ತಮಗೆ ನೀಡಿರುವ ಜವಾಬ್ದಾರಿ ಅರಿತು ನಿಷ್ಠೆಯಿಂದ ಕೆಲಸ ಮಾಡಬೇಕು. ಜಿಲ್ಲೆಯಲ್ಲಿ ಯಾವುದೇ ಒಬ್ಬ ಅರ್ಹ ಮತದಾರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಬೂತ್ ಮಟ್ಟದ ಏಜೆಂಟರಿಗೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ ಕುರಿತು ಮಾನ್ಯತಾ ಪಡೆದ ರಾಜಕೀಯ […]

ತೈಲ ಕಂಪನಿಗಳ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಜೂ.03:ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದಾಸ್ತಾನು ಸಮರ್ಪಕವಾಗಿದ್ದು, ಯಾವುದೇ ರೀತಿಯ ಇಂಧನ ಕೊರತೆ ಇಲ್ಲ. ಇಂಧನ ಪೂರೈಕೆ ಎಂದಿನಂತೆ ಸಹಜವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯಿಲ್ ಕಂಪನಿಗಳ ಅಧಿಕಾರಿಗಳು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.    ಇಂಧನದ ಅನಧಿಕೃತ ದಾಸ್ತಾನು ಇರಿಸುವುದು ಮತ್ತು ತಾತ್ಕಾಲಿಕ ಕೊರತೆ ಸೃಷ್ಠಿಸುವಂತಹ ಪ್ರಕರಣ ಕಂಡುಬಂದಲ್ಲಿ ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಸಂಬಂಧಪಟ್ಟ ನಿಯಮಗಳಡಿ […]

ಹಾಲು ಉತ್ಪಾದಕರೇ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು. ಹಾಲು ಉತ್ಪಾದನೆಯಲ್ಲಿ ರಾಜ್ಯ ದ್ವಿತೀಯ.ಬಿ.ಸಿ ಸಂಜೀವ ಮೂರ್ತಿ

ವರದಿ:- ಅರುಣ್ ಕುಮಾರ್.ಎಸ್ (ದೊಡ್ಡ ಉಳ್ಳಾರ್ತಿ) ಪ್ರತಿನಿತ್ಯ ಒಂದು ಕೋಟಿ ಲೀಟರ್ ಗೂ ಅಧಿಕ ಹಾಲು ಹಾಗೂ ಉತ್ಪಾದಿಸುವ ಕರ್ನಾಟಕ ಕ್ಷೀರ ಉತ್ಪಾದನೆಯಲ್ಲಿ ದೇಶದಲ್ಲಿ 2ನೇ ಸ್ಥಾನದಲ್ಲಿದೆ ಎಂದು ಶಿಮುಲ್ ನಿರ್ದೇಶಕ ಬಿ.ಸಿ ಸಂಜೀವಮೂರ್ತಿ ಹೇಳಿದರು. ನಗರದ ನಂದಿನಿ ಪಾರ್ಲರ್ ನಲ್ಲಿ ಶಿವಮೊಗ್ಗ ಹಾಲು ಒಕ್ಕೂಟದಿಂದ ಸೋಮವಾರ ಆಯೋಜಿಸಿದ್ದ ವಿಶ್ವ ಹಾಲು ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ ಜಗತ್ತಿನ ಒಟ್ಟಾರೆ ಉತ್ಪಾದನೆಯಲ್ಲಿ ಶೇ.27ರಷ್ಟು ಹಾಲು ಭಾರತದಲ್ಲಿ ಉತ್ಪಾದನೆಯಾಗುತ್ತದೆ. ದೇಶದಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದು ಕರ್ನಾಟಕ 2ನೇ ಸ್ಥಾನ ಪಡೆದಿದೆ, […]

ಸರ್ಕಾರ ಹಾಗೂ ಶಿಮುಲ್ ವತಿಯಿಂದ ದೊರೆಯುವ ಸೌಲಭ್ಯಗಳನ್ನು ಪ್ರತಿಯೊಬ್ಬ ಹೈನುಗಾರ ರೈತನಿಗೂ ತಲುಪಿಸುವ ಜವಾಬ್ದಾರಿ ಕಾರ್ಯದರ್ಶಿಗಳ ಮೇಲಿದೆ – ಬಿ.ಸಿ ಸಂಜೀವಮೂರ್ತಿ

ವರದಿ :- ಅರುಣ್ ಕುಮಾರ್. ಎಸ್ (ದೊಡ್ಡ ಉಳ್ಳಾರ್ತಿ) ಚಳ್ಳಕೆರೆ, ಜೂನ್ 2 :- ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಮೇ ತಿಂಗಳಿನ ಕಾರ್ಯದರ್ಶಿಗಳ ಪ್ರಗತಿಪರಿಶೀಲನಾ ಸಭೆಯು ಚಳ್ಳಕೆರೆಯ ನಂದಿನಿ ಉಪ ಕಚೇರಿಯ ಕುರಿಯನ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಇತ್ತೀಚೆಗೆ ನಿಧನರಾದ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಿ, ಶ್ರದ್ಧಾಂಜಲಿ ಅರ್ಪಿಸಲಾಯಿತು.ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿ.ಸಿ. ಸಂಜೀವಮೂರ್ತಿ.ಹಾಲು ಉತ್ಪಾದಕರ ಸಹಕಾರ ಸಂಘಗಳು ಗ್ರಾಮೀಣ ಆರ್ಥಿಕ ವ್ಯವಸ್ಥೆಯ ಬೆನ್ನೆಲುಬಾಗಿದ್ದು, […]

ಚರಂಡಿ ಅವ್ಯವಸ್ಥೆಗೆ ಕೆರೆಯಾದ ರಸ್ತೆ : ಗ್ರಾಮಸ್ಥರ ಗೋಳು ಕೇಳುವವರು ಯಾರು?

ವರದಿ:- ಅರುಣ್ ಕುಮಾರ್.ಎಸ್(ದೊಡ್ಡ ಉಳ್ಳಾರ್ತಿ) ಚಳ್ಳಕೆರೆ :- ನಗರಂಗೆರೆ ಗ್ರಾಮದ ಬೋವಿ ಕಾಲೋನಿಯ ಬಾಬು ಅವರ ಮನೆ ಸಮೀಪ ಮಳೆ ನೀರು ರಸ್ತೆಯ ಮೇಲೆಯೇ ನಿಂತು ಕೆರೆಯಂತಾಗಿರುವ ಪರಿಣಾಮ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ. ಸೂಕ್ತ ಚರಂಡಿ ವ್ಯವಸ್ಥೆಯ ಕೊರತೆಯಿಂದ ಮಳೆ ನೀರು ಹರಿದು ಹೋಗದೆ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು,ಮಳೆಯ ನೀರು ಮನೆಗೆ ನುಗ್ಗುತ್ತಿವೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬೋವಿ ಕಾಲೋನಿಯಿಂದ ಮುಖ್ಯ ಚರಂಡಿಗೆ ಸಂಪರ್ಕ ಕಲ್ಪಿಸುವ ವ್ಯವಸ್ಥೆ ಇಲ್ಲದ ಕಾರಣ […]