ಜೂನ್ 28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ: ಜಾಗೃತಿ ಜಾಥಾಕ್ಕೆ ಚಾಲನೆಯಾವುದೇ ಮಗು ಲಸಿಕೆಯಿಂದ ವಂಚಿತರಾಗಬಾರದು -ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್

ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತರಾಗಬಾರದು ಎಂದು ಉಪವಿಭಾಗಾಧಿಕಾರಿ ಡಾ. ಕಾಂತರಾಜ್ ಹೇಳಿದರು.ನಗರದ ಜಿಲ್ಲಾಆಸ್ಪತ್ರ ಆವರಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ರೆಡ್ ಕ್ರಾಸ್ ಸಂಸ್ಥೆ ಹಾಗೂ ರೋಟರಿ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ […]
ಡಾ.ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರಿಗೆ ನಾಡಪ್ರಭು ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ನೀಡಲಾಗುವ ಅಂತರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿಗಳ ಪೈಕಿ ಈ ಭಾರಿ ಚಿತ್ರದುರ್ಗದ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಪೀಠಾಧ್ಯಕ್ಷರಾದ ಡಾ.ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸ್ವಾಮೀಜಿಗಳ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆ, ಪರಿಸರ ಕಾಳಜಿ, ಯುವಜನ ಸಬಲೀಕರಣ, ಸಮಸಮಾಜದ ನಿರ್ಮಾಣ ಹಾಗೂ ರಾಷ್ಟ್ರೀಯತೆಯ ಸೇವಾ ಕಾರ್ಯಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ […]
ಯೋಗ ನಡಿಗೆ ಜಾಥಾಕ್ಕೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಚಾಲನೆಯೋಗವನ್ನು ಜೀವನದ ಭಾಗವಾಗಿಸಿಕೊಳ್ಳಿ

ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಯೋಗದ ಪಾತ್ರ ದೊಡ್ಡದಾಗಿದ್ದು, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗ ರೂಢಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶನಿವಾರ ಆಯುಷ್ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘ಯೋಗ ನಡಿಗೆ ಜಾಥಾ’ಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ಜನರು ಆರೋಗ್ಯ ನಿರ್ಲಕ್ಷಿಸಿ ಆಸ್ತಿ, ಹಣದ ಬೆನ್ನತ್ತುತ್ತಿದ್ದಾರೆ. ಕೊನೆಗೆ ಅದೇ ಆರೋಗ್ಯ ಕಾಪಾಡಿಕೊಳ್ಳಲು […]
ಸಂಚಾರಿ ನಿಯಮ ಉಲ್ಲಂಘನೆ ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿ-ಸಾರ್ವಜನಿಕ ಜಾಗೃತಿ ಅಭಿಯಾನಕ್ಕೆ ನ್ಯಾಯಾಧೀಶ ಸುದೀನ್ ಕುಮಾರ್ ಚಾಲನೆಸಂಚಾರ ನಿಯಮಗಳ ಪಾಲನೆ ಸ್ವಯಂ ರಕ್ಷಣೆಗಾಗಿ

ಸಂಚಾರಿ ನಿಯಮಗಳು ಇರುವುದು ಕೇವಲ ಪೊಲೀಸರು, ಆರ್ಟಿಒ ಅಧಿಕಾರಿಗಳಿಗೆ ಹೆದರಿ ಪಾಲಿಸುವುದಕ್ಕಲ್ಲ, ಬದಲಿಗೆ ನಮ್ಮ ಮತ್ತು ನಮ್ಮ ಕುಟುಂಬದ ಸುರಕ್ಷತೆಗಾಗಿ ಎಂಬುದನ್ನು ಪ್ರತಿಯೊಬ್ಬ ವಾಹನ ಸವಾರನೂ ಅರಿತುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುದೀನ್ ಕುಮಾರ್ ತಿಳಿಸಿದರು.ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಆವರಣದಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ ಸಹಯೋಗದಲ್ಲಿ ಇದೇ ಜೂನ್ 21 ರಿಂದ ಜುಲೈ 10 ರವರೆಗೆ […]
ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಅಭಿವೃದ್ಧಿ ಕಡೆಗೆ ಕೊಂಡೊಯ್ಯುವೆ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

ನನ್ನ ಪಾಲಿಗೆ ಬಂದ ಕೆಲಸ ನಾನು ಪ್ರಾಮಾಣಿಕವಾಗಿ ಮಾಡುವೆ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ೧ ಕೋಟಿ ೨೦ ಲಕ್ಷ ವೆಚ್ಚದ ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಚಿತ್ರದುರ್ಗ, ಜೂನ್ ೨೦ : ನನ್ನ ಮತ ಕ್ಷೇತ್ರದ ಅಭಿವೃದ್ಧಿಯ ಕಡೆಗೆ ಕೊಂಡೊಯ್ಯುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದೇನೆ, ನನ್ನ ಪಾಲಿಗೆ ಬಂದ ಕೆಲಸವನ್ನು ಪ್ರಾಮಾಣಿಕವಾಗಿ ಜನರಿಗೆ ಅನುಕೂಲ ವಾಗುವಂತಹ ಅಭಿವೃದ್ಧಿ ಕೆಲಸವನ್ನು ಕ್ಷೇತ್ರದ ವಿವಿಧಡೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ನಗರದ ಶ್ರೀ ಶನೇಶ್ವರ ದೇವಸ್ಥಾನ ಹಾಗೂ […]
ಉಜ್ಜನಪ್ಪ ನಿಧನ ಜಿಲ್ಲೆಗೆ ದೊಡ್ಡ ನಷ್ಟ

ಶೀಘ್ರದಲ್ಲಿ ನುಡಿನಮನ ಕಾರ್ಯಕ್ರಮ > ಜಿಲ್ಲಾ ನೀರಾವರಿ ಹೋರಾಟ ಸಮಿತಿ ಹೇಳಿಕೆ ಚಿತ್ರದುರ್ಗ, ಜೂ.20: ಹಿರಿಯ ಪತ್ರಕರ್ತ, ಕತೆಗಾರ, ಪ್ರಗತಿಪರ ಕೃಷಿಕ, ನೀರಾವರಿಹೋರಾಟಗಾರ ಜಿ.ಎಸ್.ಉಜ್ಜಿನಪ್ಪ ಅವರ ನಿಧನ ಜಿಲ್ಲೆಗೆ ಅತ್ಯಂತ ನಷ್ಟವನ್ನುಂಟು ಮಾಡಿದೆಎಂದು ಜಿಲ್ಲಾ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಪಿ.ಕೋದಂಡರಾಮಯ್ಯ, ಪ್ರಧಾನ ಸಂಚಾಲಕಡಾ. ಬಂಜಗೆರೆ ಜಯಪ್ರಕಾಶ್ ಸಂತಾಪ ಸೂಚಿಸಿದ್ದಾರೆ.ಪತ್ರಿಕೆ ವಿತರಣೆ ಮೂಲಕ ಪತ್ರಿಕಾ ಕ್ಷೇತ್ರ ಪ್ರವೇಶಿಸಿ ಬಳಿಕ ವರದಿಗಾರರಾಗಿದ್ದಉಜ್ಜನಪ್ಪ ಕೇವಲ ವೃತ್ತಿಗೆ ಸೀಮಿತಗೊಳ್ಳದೆ ಜಿಲ್ಲೆಯ ಪ್ರಗತಿಗೆ ಶ್ರಮಿಸಿದ್ದಾರೆ.ಜಿಲ್ಲಾ ನೀರಾವರಿ ಹೋರಾಟ ಸಮಿತಿ ಸ್ಥಾಪನೆಯಲ್ಲಿ ಮುಂಚೂಣಿಯಲ್ಲಿ ನಿಂತಿದ್ದರು. […]
ನೀಟ್ ಅಭ್ಯರ್ಥಿಗಳದ್ದು ಆತ್ಮಹತ್ಯೆಯಲ್ಲ; ಸರ್ಕಾರ ನಡೆಸಿದ ನರಮೇಧ”- ಮಹಾಂತೇಶ ಬಿಳೂರ್ ಆಕ್ರೋಶ!*

*ನೀಟ್ ಅವಾಂತರ ಖಂಡಿಸಿ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ!* ಚಿತ್ರದುರ್ಗ: ನೀಟ್ ಪರೀಕ್ಷೆಯಲ್ಲಿನ ಅವಾಂತರ ಮತ್ತು ಸರ್ಕಾರದ ಬೇಜವಾಬ್ದಾರಿತನದಿಂದ ನಡೆಯುತ್ತಿರುವ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಖಂಡಿಸಿ ಇಂದು ಎಐಡಿಎಸ್ಓ ನೇತೃತ್ವದ ಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಯಿತು. ನಗರದ ಡಿಸಿ ಸರ್ಕಲ್ ನಲ್ಲಿ ಸೇರಿದ ವಿದ್ಯಾರ್ಥಿಗಳು ಎನ್ ಟಿ ಎ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಂಘಟನೆಯ ರಾಜ್ಯ ಕಚೇರಿ ಕಾರ್ಯದರ್ಶಿ ಮಹಾಂತೇಶ ಬಿಳೂರ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, “ಮೇ 3 ರಂದು […]
ಹಿರಿಯ ಸಾಹಿತಿ, ಪತ್ರಕರ್ತ ಶ್ರೀ ಜಿ.ಎಸ್. ಉಜ್ಜಿನಪ್ಪ ಇನ್ನಿಲ್ಲ…

(ಜನನ : 30-10-1939, ಮರಣ : 20-06-2026.) ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕು ಗೌನಹಳ್ಳಿಯ ತಂದೆ ಗೊಂಚಿಗಾರ ಸಿದ್ದಯ್ಯ, ತಾಯಿ ಲಿಂಗಮ್ಮ ದಂಪತಿಗಳ ಹಿರಿಯ ಮಗನಾಗಿ ದಿ: 30.10.1939 ರಲ್ಲಿ ಜನಿಸಿದರು.ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಎ ಪದವಿ (1962), ಬೆಂಗಳೂರಿನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ನಿಂದ ಡಿಎಸ್ಎಸ್ಎ ಸ್ನಾತಕೋತ್ತರ ಡಿಪ್ಲೋಮಾ (1965), ಅಲ್ಪಕಾಲ ಮಧುಗಿರಿ ತಾಲ್ಲೂಕಿನ ದಂಡಿನದಿಬ್ಬ ಗ್ರಾಮದಲ್ಲಿ ಶಿಕ್ಷಕರಾಗಿದ್ದರು (1962), ಬೆಂಗಳೂರಿನ ಗಾಂಧೀನಗರದಲ್ಲಿರುವ ಆರ್ಯ ವಿದ್ಯಾಶಾಲಾ ಪ್ರೌಢಶಾಲೆಯಲ್ಲಿ (1965), ಅಧ್ಯಾಪಕರಾಗಿ ಕೆಲಸ, ದೂರದ ಗುಲ್ಬರ್ಗಾದ ಎಂ.ಎಸ್.ಕೆ […]
ಹಿರಿಯೂರು–ಸಂಗೇನಹಳ್ಳಿ ಹೊಸ ಬಸ್ ಮಾರ್ಗ ಉದ್ಘಾಟನೆ: ಗ್ರಾಮಸ್ಥರಲ್ಲಿ ಹರ್ಷ

ಹಿರಿಯೂರು: ಹಿರಿಯೂರು ಪ್ರದೇಶದ ಜನತೆಗೆ ಸಂಚಾರ ಸುಗಮಗೊಳಿಸುವ ಉದ್ದೇಶದಿಂದ ಹಿರಿಯೂರು–ಮಸ್ಕಲ್–ಕುಡಲಹಳ್ಳಿ–ಈಶ್ವರಗೇರಿ–ಕಂಬತ್ನಹಳ್ಳಿ–ಸಂಗೇನಹಳ್ಳಿ ಮಾರ್ಗದಲ್ಲಿ ಹೊಸ ಬಸ್ ಸೇವೆಯನ್ನು ಇಂದು ಅಧಿಕೃತವಾಗಿ ಪ್ರಾರಂಭಿಸಲಾಯಿತು. ಬಸ್ಗೆ ಪರಂಪರೆಯಂತೆ ಬಾಳೆ ಎಲೆ ಅಲಂಕರಿಸಿ, ಗ್ರಾಮಸ್ಥರ ಸಮ್ಮುಖದಲ್ಲಿ ಪೂಜೆ ನೆರವೇರಿಸಲಾಯಿತು. ಈ ಹೊಸ ಮಾರ್ಗದ ಮೂಲಕ ಗ್ರಾಮಗಳ ನಡುವೆ ಸಂಚಾರ ಸುಲಭವಾಗಲಿದ್ದು, ವಿದ್ಯಾರ್ಥಿಗಳು, ರೈತರು ಹಾಗೂ ದೈನಂದಿನ ಪ್ರಯಾಣಿಕರಿಗೆ ಇದು ದೊಡ್ಡ ಅನುಕೂಲವಾಗಲಿದೆ ಎಂದು ಸ್ಥಳೀಯರು ಸಂತೋಷ ವ್ಯಕ್ತಪಡಿಸಿದ್ದಾರೆ. ಬಸ್ ಹಿರಿಯೂರಿನಿಂದ ಪ್ರಾರಂಭವಾಗಿ ಮಸ್ಕಲ್, ಕುಡಲಹಳ್ಳಿ, ಈಶ್ವರಗೇರಿ, ಕಂಬತ್ನಹಳ್ಳಿ, ಸಂಗೇನಹಳ್ಳಿ ಮಾರ್ಗವಾಗಿ ಸಂಚರಿಸಿ, ಮತ್ತೆ […]
ಚನ್ನಯ್ಯನಹಟ್ಟಿ: ಅಂತರ್ಜಾತಿ ವಿವಾಹಿತ ನವಜೋಡಿಗೆ ಅಧಿಕಾರಿಗಳು, ಅಟ್ರಾಸಿಟಿ ಸಮಿತಿ ಸದಸ್ಯರಿಂದ ಧೈರ್ಯ: ಸೌಲಭ್ಯಗಳ ಭರವಸೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್19:ಚಿತ್ರದುರ್ಗ ತಾಲ್ಲೂಕಿನ ಚನ್ನಯ್ಯನಹಟ್ಟಿ ಗ್ರಾಮದಲ್ಲಿ ಇತ್ತೀಚೆಗೆ ಅಂತರ್ಜಾತಿ ವಿವಾಹವಾಗಿದ್ದ ನವಜೋಡಿಯನ್ನು ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿಗಳು ಹಾಗೂ ಅಟ್ರಾಸಿಟಿ ಸಮಿತಿ ಸದಸ್ಯರು ಖುದ್ದಾಗಿ ಭೇಟಿ ಮಾಡಿ, ಕಾನೂನು ರಕ್ಷಣೆ ಹಾಗೂ ಇಲಾಖೆಯ ಸೌಲಭ್ಯಗಳ ಭರವಸೆ ನೀಡುವ ಮೂಲಕ ಧೈರ್ಯ ತುಂಬಿದ್ದಾರೆ.ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಓ. ಪರಮೇಶ್ವರಪ್ಪ ಅವರು ನವಜೋಡಿಯನ್ನು ಭೇಟಿಯಾಗಿ ಮಾತನಾಡಿ, ಯಾವುದೇ ಕಾರಣಕ್ಕೂ ನಿಮ್ಮ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಬಾರದು, ಅದನ್ನು ಮುಂದುವರಿಸಬೇಕು ಎಂದು ಸಲಹೆ ನೀಡಿದರು. ಅಲ್ಲದೆ, ಆದಷ್ಟು ಬೇಗ […]