ತೈಲ ಕಂಪನಿಗಳ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಜೂ.03:ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದಾಸ್ತಾನು ಸಮರ್ಪಕವಾಗಿದ್ದು, ಯಾವುದೇ ರೀತಿಯ ಇಂಧನ ಕೊರತೆ ಇಲ್ಲ. ಇಂಧನ ಪೂರೈಕೆ ಎಂದಿನಂತೆ ಸಹಜವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯಿಲ್ ಕಂಪನಿಗಳ ಅಧಿಕಾರಿಗಳು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.    ಇಂಧನದ ಅನಧಿಕೃತ ದಾಸ್ತಾನು ಇರಿಸುವುದು ಮತ್ತು ತಾತ್ಕಾಲಿಕ ಕೊರತೆ ಸೃಷ್ಠಿಸುವಂತಹ ಪ್ರಕರಣ ಕಂಡುಬಂದಲ್ಲಿ ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಸಂಬಂಧಪಟ್ಟ ನಿಯಮಗಳಡಿ […]

ಹಾಲು ಉತ್ಪಾದಕರೇ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು. ಹಾಲು ಉತ್ಪಾದನೆಯಲ್ಲಿ ರಾಜ್ಯ ದ್ವಿತೀಯ.ಬಿ.ಸಿ ಸಂಜೀವ ಮೂರ್ತಿ

ವರದಿ:- ಅರುಣ್ ಕುಮಾರ್.ಎಸ್ (ದೊಡ್ಡ ಉಳ್ಳಾರ್ತಿ) ಪ್ರತಿನಿತ್ಯ ಒಂದು ಕೋಟಿ ಲೀಟರ್ ಗೂ ಅಧಿಕ ಹಾಲು ಹಾಗೂ ಉತ್ಪಾದಿಸುವ ಕರ್ನಾಟಕ ಕ್ಷೀರ ಉತ್ಪಾದನೆಯಲ್ಲಿ ದೇಶದಲ್ಲಿ 2ನೇ ಸ್ಥಾನದಲ್ಲಿದೆ ಎಂದು ಶಿಮುಲ್ ನಿರ್ದೇಶಕ ಬಿ.ಸಿ ಸಂಜೀವಮೂರ್ತಿ ಹೇಳಿದರು. ನಗರದ ನಂದಿನಿ ಪಾರ್ಲರ್ ನಲ್ಲಿ ಶಿವಮೊಗ್ಗ ಹಾಲು ಒಕ್ಕೂಟದಿಂದ ಸೋಮವಾರ ಆಯೋಜಿಸಿದ್ದ ವಿಶ್ವ ಹಾಲು ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ ಜಗತ್ತಿನ ಒಟ್ಟಾರೆ ಉತ್ಪಾದನೆಯಲ್ಲಿ ಶೇ.27ರಷ್ಟು ಹಾಲು ಭಾರತದಲ್ಲಿ ಉತ್ಪಾದನೆಯಾಗುತ್ತದೆ. ದೇಶದಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದು ಕರ್ನಾಟಕ 2ನೇ ಸ್ಥಾನ ಪಡೆದಿದೆ, […]

ಸರ್ಕಾರ ಹಾಗೂ ಶಿಮುಲ್ ವತಿಯಿಂದ ದೊರೆಯುವ ಸೌಲಭ್ಯಗಳನ್ನು ಪ್ರತಿಯೊಬ್ಬ ಹೈನುಗಾರ ರೈತನಿಗೂ ತಲುಪಿಸುವ ಜವಾಬ್ದಾರಿ ಕಾರ್ಯದರ್ಶಿಗಳ ಮೇಲಿದೆ – ಬಿ.ಸಿ ಸಂಜೀವಮೂರ್ತಿ

ವರದಿ :- ಅರುಣ್ ಕುಮಾರ್. ಎಸ್ (ದೊಡ್ಡ ಉಳ್ಳಾರ್ತಿ) ಚಳ್ಳಕೆರೆ, ಜೂನ್ 2 :- ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಮೇ ತಿಂಗಳಿನ ಕಾರ್ಯದರ್ಶಿಗಳ ಪ್ರಗತಿಪರಿಶೀಲನಾ ಸಭೆಯು ಚಳ್ಳಕೆರೆಯ ನಂದಿನಿ ಉಪ ಕಚೇರಿಯ ಕುರಿಯನ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಇತ್ತೀಚೆಗೆ ನಿಧನರಾದ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಿ, ಶ್ರದ್ಧಾಂಜಲಿ ಅರ್ಪಿಸಲಾಯಿತು.ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿ.ಸಿ. ಸಂಜೀವಮೂರ್ತಿ.ಹಾಲು ಉತ್ಪಾದಕರ ಸಹಕಾರ ಸಂಘಗಳು ಗ್ರಾಮೀಣ ಆರ್ಥಿಕ ವ್ಯವಸ್ಥೆಯ ಬೆನ್ನೆಲುಬಾಗಿದ್ದು, […]

ರೈತರು ದೇಶದ ಆರ್ಥಿಕತೆಯ ಬೆನ್ನೆಲುಬು ಮಾತ್ರವಲ್ಲ, ಅನ್ನ ನೀಡುವ ಅನ್ನದಾತರು. ಅವರ ಶ್ರಮ ಮತ್ತು ಬೆವರಿನ ಫಲದಿಂದಲೇ ಸಮಾಜದ ಬದುಕು : ಕರವೇ (ಕನ್ನಡ ಸೇನೆ)ತಾಲ್ಲೂಕು ಅಧ್ಯಕ್ಷ ಪಿ.ಮುತ್ತಯ್ಯ ಕರೆ.

ವರದಿ:- ಅರುಣ್ ಕುಮಾರ್. ಎಸ್(ದೊಡ್ಡ ಉಳ್ಳಾರ್ತಿ) ಚಿತ್ರದುರ್ಗ:- ಮದ್ಯ ಕರ್ನಾಟಕದ ಪ್ರಮುಖ ಪ್ರದೇಶವಾದ ಚಿತ್ರದುರ್ಗ ಜಿಲ್ಲೆ,ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯು ಅತಿ ಕಡಿಮೆ  ಮಳೆ ಬೀಳುವ ಪ್ರದೇಶವೆಂದು ಹೆಸರಾಗಿದ್ದು,ಆದರೆ ಶ್ರೀ ಗುರು ತಿಪ್ಪೇರುದ್ರ ಸ್ವಾಮಿಯ ಕೃಪೆಯಿಂದ ಉತ್ತಮವಾದ ಮುಂಗಾರು ಮಳೆ ಪ್ರಾರಂಭವಾಗಿದ್ದು ರೈತರ ಮೊಗದಲ್ಲಿ ಮಂದಹಾಸ ಪ್ರಾರಂಭವಾಗಿದೆ,ಮುಂಗಾರು ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಯಾವುದೇ ತೊಂದರೆಯಾಗದಂತೆ ಸಕಾಲದಲ್ಲಿ ಗುಣಮಟ್ಟದ ಬೀಜ ಹಾಗೂ ಗೊಬ್ಬರಗಳನ್ನು ಪೂರೈಸುವಂತೆ ಒತ್ತಾಯಿಸಿ, ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡ ಸೇನೆ) ನಾಯಕನಹಟ್ಟಿ ಹೋಬಳಿ ಘಟಕದ ವತಿಯಿಂದ ಕೃಷಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಕರವೇ […]

ಶಾಲಾ ಪ್ರಾರಂಭೋತ್ಸವದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿಕೆಖಾಸಗಿ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆ ಉಳಿಸಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್ 01:ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಅಳಿವಿನ ಅಂಚಿಗೆ ತಲುಪುತ್ತಿರುವುದು ಕಳವಳಕಾರಿ ಸಂಗತಿ. ಇವುಗಳ ಉಳಿವು ಕೇವಲ ಸರ್ಕಾರದ ಕೈಯಿಂದ ಮಾತ್ರ ಸಾಧ್ಯವಿಲ್ಲ. ಸರ್ಕಾರದ ಜೊತೆಗೆ ಪೋಷಕರು ಮತ್ತು ಶಿಕ್ಷಕರು ಕೈಜೋಡಿಸಿದಾಗ ಮಾತ್ರ ಸರ್ಕಾರಿ ಶಾಲೆಗಳನ್ನು ಉಳಿಸಲು ಮತ್ತು ಬೆಳೆಸಲು ಸಾಧ್ಯ  ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು.  ಚಿತ್ರದುರ್ಗ ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಆವರಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು […]

ಹಿಂದುಳಿದ ಜಿಲ್ಲೆಗೆ ಹೋರಾಟ ಮಾಡಿದ ನಾಯಕನಿಗೆ ಸಚಿವ ಸ್ಥಾನ ಸಿಗಲೇಬೇಕು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ ಟಿ.ರಘುಮೂರ್ತಿಗೆ ಸಚಿವ ಸ್ಥಾನ ನೀಡಲು ಒತ್ತಾಯ. ಕೆ.ಟಿ ಶಿವುಕುಮಾರ್

ವರದಿ:- ಅರುಣ್ ಕುಮಾರ್.ಎಸ್( ದೊಡ್ಡಉಳ್ಳಾರ್ತಿ) ಚಿತ್ರದುರ್ಗ, ಮೇ. 29 : ಮೂರು ಬಾರಿ ಶಾಸಕರಾಗಿ ಚಳ್ಳಕೆರೆ ಕ್ಷೇತ್ರವನ್ನು ರಾಜ್ಯಕ್ಕೆ ಮಾದರಿಯನ್ನಾಗಿ ಅಭಿವೃದ್ದಿಪಡಿಸಿರುವ ಶಾಸಕ ಟಿ.ರಘುಮೂರ್ತಿಗೆ ಹೊಸ ಸರ್ಕಾರದಲ್ಲಿ ಸಚಿವ ಸ್ಥಾನ ನೀಡುವಂತೆ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರುಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಸ್.ನಿಜಲಿಂಗಪ್ಪನವರನ್ನು ಹೊರತುಪಡಿಸಿದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಬೇರೆ ಯಾರಿಗೂ ರಾಜಕೀಯವಾಗಿ ಉನ್ನತ ಸ್ಥಾನಮಾನ ಸಿಕ್ಕಿಲ್ಲ. ಮಧ್ಯ ಕರ್ನಾಟಕದ ಬಯಲು ಸೀಮೆ ಚಿತ್ರದುರ್ಗ ಜಿಲ್ಲೆ ಹಿಂದುಳಿದ ಪ್ರದೇಶ. ಚಳ್ಳಕೆರೆಗೆ ಮಂಜೂರಾಗಿದ್ದ ಡಿಗ್ರಿ ಕಾಲೇಜು […]

ಬ್ಯಾಂಕ್‍ನ ಪ್ರಗತಿ ಹಾಗೂ ರೈತರ ಹಿತರಕ್ಷಣೆಗೆ ಬದ್ಧವಾಗಿ ಕೆಲಸ ಮಾಡುವೆ :- ನೂತನ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕರಾದ ಟಿ. ರಘುಮೂರ್ತಿ ಅವಿರೋಧವಾಗಿ ಆಯ್ಕೆ

ವರದಿ :- ಅರುಣ್ ಕುಮಾರ್ .ಎಸ್(ದೊಡ್ಡಉಳ್ಳಾರ್ತಿ) ಚಿತ್ರದುರ್ಗ. ಮೇ.29: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ (ಡಿಸಿಸಿ) ನೂತನ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕರಾದ ಟಿ. ರಘುಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಸಚಿವ ಡಿ.ಸುಧಾಕರ್ ಅವರ ಅಕಾಲಿಕ ನಿಧನದ ಹಿನ್ನಲೆಯಲ್ಲಿ, ಸಹಕಾರ ಸಂಘಗಳ ಕಾಯ್ದೆ ಪ್ರಕಾರ ಶುಕ್ರವಾರ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ನೂತನ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಇಲ್ಯಾಸ್ […]

“ಜನಪರ ಬಜೆಟ್: ಕೃಷಿ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯಕ್ಕೆ ಒತ್ತು”

2026–27ನೇ ಸಾಲಿನ ಬಜೆಟ್ ವೈಶಿಷ್ಟ್ಯಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ತಮ್ಮ 17ನೇ ಬಜೆಟ್ ಮಂಡಿಸಿ, ಕರ್ನಾಟಕದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ನಾಯಕ ಎಂಬ ದಾಖಲೆ ಬರೆದಿದ್ದಾರೆ. ₹4,48,004 ಕೋಟಿ ವೆಚ್ಚದ 2026–27ನೇ ಸಾಲಿನ ಬಜೆಟ್, ಜನಪರ ಯೋಜನೆಗಳು, AI ತಂತ್ರಜ್ಞಾನ, ಮಹಿಳಾ ಕಲ್ಯಾಣ, ಕೃಷಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿದೆ. ಸಿದ್ದರಾಮಯ್ಯ ಬಜೆಟ್ ಇತಿಹಾಸ – 1995ರಿಂದ 2026ರ ವರೆಗೆ ಅವಧಿ ಸರ್ಕಾರ ಬಜೆಟ್ ಸಂಖ್ಯೆ ಪ್ರಮುಖ ಅಂಶಗಳು 1995–1999 […]

ದಲಿತ ಸಂಘರ್ಷ ಸಮಿತಿ ಕಾಟಂದೇವರ ಕೋಟೆ ಯಲ್ಲಿ ನೂತನ ಗ್ರಾಮ ಶಾಖೆ,ಮತ್ತು ನಾಮಫಲಕ ಉದ್ಘಾಟನೆ –ಜಾತಿ, ಧರ್ಮ, ವರ್ಗ ಬೇಧಗಳಿಲ್ಲದ ಸಮಾನ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಶಾಶ್ವತ ದಾರಿಟಿ, ವಿಜಿಕುಮಾರ್ ಕರೆ

ವರದಿ :- ಉಳ್ಳಾರ್ತಿ,ಅರುಣ್ ಕುಮಾರ್, ಎಸ್ ಚಳ್ಳಕೆರೆ:- ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ಕಾಟಂದೇವರಕೋಟೆಯಲ್ಲಿ,ದಲಿತ ಸಂಘರ್ಷ ಸಮಿತಿಯ ನೂತನ ಗ್ರಾಮ ಶಾಖೆ ಮತ್ತು ನಾಮಫಲಕವನ್ನು ಇಂದು ಗೌರವಪೂರ್ವಕವಾಗಿ ಉದ್ಘಾಟಿಸಲಾಯಿತು. ಕಾರ್ಯಕ್ರಮವು ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಶಿಕ್ಷಣದ ಮಹತ್ವವನ್ನು ಒತ್ತಿಹೇಳುವ ವೇದಿಕೆಯಾಗಿತ್ತು.ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕರಾದಟಿ. ವಿಜಿಕುಮಾರ್ ರವರು, ದಲಿತ ಸಂಘರ್ಷ ಸಮಿತಿಯ ಮೂಲ ಉದ್ದೇಶವು ದಲಿತ ಸಮುದಾಯದ ಹಕ್ಕುಗಳ ರಕ್ಷಣೆ, ಜಾತಿ ಭೇದಭಾವ ಮತ್ತು ಅಸ್ಪೃಶ್ಯತೆ ನಿರ್ಮೂಲನೆ ಹಾಗೂ ಸಂವಿಧಾನಾತ್ಮಕ […]

ಕಾಮ, ಕ್ರೋಧ, ಲೋಭ, ಮೋಹ, ಮದ ಮತ್ತು ಮತ್ಸರಗಳೆಂಬ ಅರಿಷಡ್ವರ್ಗಗಳನ್ನು ಗೆದ್ದವರೇ ನಿಜವಾದ ಸಂತ:ಶ್ರೀ ನಂದಮಸಂದ್ ಸೇವಲಾಲ್ ಸ್ವಾಮೀಜಿ

ಅಖಿಲ ಕರ್ನಾಟಕ ಬಂಜಾರ (ಲಂಬಾಣಿ) ಗುರುಪೀಠದ ಶ್ರೀ ನಂದಮಸಂದ್ ಸೇವಲಾಲ್ ಸ್ವಾಮೀಜಿ ಮಾತನಾಡಿ. ಸಂತ ಸೇವಾಲಾಲ್ ಮಹಾರಾಜರು ಬಂಜಾರ ಸಮುದಾಯಕ್ಕೆ ಜ್ಞಾನ, ಅರಿವು ಮತ್ತು ಆಶ್ರಯ ನೀಡಿದ ಮಹಾನ್ ಗುರುಗಳಾಗಿದ್ದಾರೆ. ಕಾಮ, ಕ್ರೋಧ, ಲೋಭ, ಮೋಹ, ಮದ ಮತ್ತು ಮತ್ಸರಗಳೆಂಬ ಅರಿಷಡ್ವರ್ಗಗಳನ್ನುಟಿ ಗೆದ್ದವರೇ ನಿಜವಾದ ಸಂತ ಎಂದು ಹೇಳಿದರು.ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ ಜಿಲ್ಲಾಧ್ಯಕ್ಷ ಗಿರೀಶ್ ನಾಯ್ಕ್ ಆರ್ , ವಿಶೇಷ ಉಪನ್ಯಾಸ ನೀಡಿ, ಸಂತ ಸೇವಾಲಾಲ್ ಅವರು ಬುಡಕಟ್ಟು ಜನರಲ್ಲಿ ಧೈರ್ಯ ಸಾಹಸ, […]