ಧಾರ್ಮಿಕ ಕಾರ್ಯದಲ್ಲಿ ಇರಲಿ ಸಹಭಾಗಿತ್ವ ಶಿಮುಲ್ ಜಿಲ್ಲಾ ನಿರ್ದೇಶಕ ಬಿ.ಸಿ. ಸಂಜೀವಮೂರ್ತಿ ಹೇಳಿಕೆ

ವರದಿ:- ಅರುಣ್ ಕುಮಾರ್. ಎಸ್ (ದೊಡ್ಡ ಉಳ್ಳಾರ್ತಿ) ಚಳ್ಳಕೆರೆ: ಜೂ.15 :-ಗ್ರಾಮದ ದೇವತಾ ಧಾರ್ಮಿಕ ಕಾರ್ಯದಲ್ಲಿ ಸರ್ವರ ಸಹಭಾಗಿತ್ವ ಇರಬೇಕು ಎಂದು ಶಿಮುಲ್ ಜಿಲ್ಲಾ ನಿರ್ದೇಶಕ ಬಿ.ಸಿ. ಸಂಜೀವಮೂರ್ತಿ ಹೇಳಿದರು.ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಗರಂಗೆರೆ ಗ್ರಾಮ ಪಂಚಾಯತಿ ಹಿತರಕ್ಷಣಾ ವೇದಿಕೆ, ಮೂರ್ತಿ ಡೆವಲಪರ್ಸ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬುದ್ದ,ಬಸವ,ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಉದ್ಟಾಟಿಸಿ ಮಾತನಾಡಿದರು. ಗ್ರಾಮದಲ್ಲಿ ಶಿಥಿಲವಾಗಿರುವ ಶ್ರೀ ದುರ್ಗಾಂಭಿಕ ದೇವಸ್ಥಾನ ನಿರ್ಮಾಣ ಕಾರ್ಯಕ್ಕೆ ಐದು ಲಕ್ಷ ಧನ ಸಹಾಯ ಮಾಡಲಾಗುವುದು. ಉಳಿದಂತೆ ಶಾಸಕರು ನೀಡಿರುವ ಅನುದಾನ ಬಳಸಿಕೊಂಡು […]
ಸಂಪೂರ್ಣ ಜಿಲ್ಲೆಯಲ್ಲಿ ಸೂಕ್ಷ್ಮ ನೀರಾವರಿ ಯೋಜನೆ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳಲ್ಲಿ ಮನವಿ

ರೈತರೊಂದಿಗಿನ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿಕೆ ಭದ್ರಾ ಮೇಲ್ದಂಡೆ ಯೋಜನೆಯಡಿ ಜಿಲ್ಲೆಯ ಯಾವುದೇ ಭಾಗಗಳು ಬಿಟ್ಟು ಹೋಗದಂತೆ, ಸಂಪೂರ್ಣ ಜಿಲ್ಲೆಯಲ್ಲಿ ಸೂಕ್ಷ್ಮ ನೀರಾವರಿ ಯೋಜನೆ ಅನುಷ್ಠಾನ ಮಾಡುವಂತೆ, ಶನಿವಾರ ಬೆಂಗಳೂರಿನಲ್ಲಿ ನಡೆಯಲ್ಲಿರುವ ಮುಖ್ಯಮಂತ್ರಿಗಳ ಸಭೆಯಲ್ಲಿ, ಜಿಲ್ಲೆಯ ರೈತರ ಪರವಾಗಿ ಮನವಿ ಮಾಡುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಗುರುವಾರ ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನದ ಕುರಿತಂತೆ ಹೊಳಲ್ಕೆರೆ ಭಾಗದ ರೈತರ ಸಮಸ್ಯೆಗಳ ಕುರಿತು ಸಭೆ ನಡೆಸಿ ಅವರು ಮಾತನಾಡಿದರು.ಪ್ರತಿ ತಾಲ್ಲೂಕುವಾರು ಸೂಕ್ಷ್ಮ ಹಾಗೂ […]
ಬಾಲಕಾರ್ಮಿಕ ಮುಕ್ತ ಸಮಾಜದಿಂದ ದೇಶದ ಭವಿಷ್ಯ ಉಜ್ವಲ – ಆರ್. ಶಿವಣ್ಣ

ವರದಿ:- ಅರುಣ್ ಕುಮಾರ್. ಎಸ್(ದೊಡ್ಡ ಉಳ್ಳಾರ್ತಿ) ಚಿತ್ರದುರ್ಗ: “ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿ ಬಾಲಕಾರ್ಮಿಕರನ್ನಾಗಿ ದುಡಿಸಿಕೊಳ್ಳುವ ವ್ಯವಸ್ಥೆಗೆ ತಿಲಾಂಜಲಿ ಹಾಡಿದಾಗ ಮಾತ್ರ ಅವರ ಭವಿಷ್ಯ ರೂಪಿಸಲು ಸಾಧ್ಯ. ಆ ಮೂಲಕ ಅವರು ದೇಶದ ಅತ್ಯುನ್ನತ ಸೇವೆಗೆ ಕೊಡುಗೆ ನೀಡಲು ಸಾಧ್ಯವಾಗುತ್ತದೆ,” ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ಆರ್. ಶಿವಣ್ಣ ತಿಳಿಸಿದರು. ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಕಾರ್ಮಿಕ […]
ಸಮಾಜ ಮುಖಿ ಕೆಲಸಗಳು ಎಲ್ಲಿರುತ್ತೋ ಅಲ್ಲಿ ಖಂಡಿತ ಜಯ ಸಿಕ್ಕೆ ಸಿಗುತ್ತದೆ: ಟಿ. ರಘುಮೂರ್ತಿ

ಟಿ.ರಘುಮೂರ್ತಿ ಯುವ ಸೇನೆ ಲೋಗೋ ಬಿಡುಗಡೆ ವರದಿ:- ಅರುಣ್ ಕುಮಾರ್. ಎಸ್. (ದೊಡ್ಡ ಉಳ್ಳಾರ್ತಿ) ಚಿತ್ರದುರ್ಗ, ಜೂನ್. 11 : ಸಮಾಜ ಮುಖಿ ಕೆಲಸಗಳು ಎಲ್ಲಿರುತ್ತೋ ಅಲ್ಲಿ ಖಂಡಿತ ಜಯ ಸಿಕ್ಕೆ ಸಿಗುತ್ತದೆ. ಹಾಗಾಗಿ ನಾನು ಮೂರನೆ ಬಾರಿಗೆ ಚಳ್ಳಕೆರೆ ಶಾಸಕನಾಗಿ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆಂದು ಶಾಸಕ ಟಿ.ರಘುಮೂರ್ತಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.ತಮ್ಮ 63 ನೇ ಜನ್ಮದಿನದ ಅಂಗವಾಗಿ ಬುಧವಾರ ಒನಕೆ ಓಬವ್ವ ವೃತ್ತದಲ್ಲಿ ಟಿ.ರಘುಮೂರ್ತಿ ಯುವ ಸೇನೆ, ಭೂಮಿ ಗೀತಾ ಪ್ರಾಪರ್ಟಿಸ್, ಅಹೋಬಲ ಟಿ.ವಿ.ಎಸ್. ಹಾಗೂ […]
ಒಂದೇ ಜಾತಿ, ಒಂದೇ ಧರ್ಮಕ್ಕೆ ಸೀಮಿತವಲ್ಲದ ಮಹಾ ಚಿಂತಕರು ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಬಸವಣ್ಣನವರು.ಬಿ.ಸಿ ಸಂಜೀವಮೂರ್ತಿ ಕರೆ

ಸಮಾನತೆ ಸಾರಿದ ಇಬ್ಬರು ಮಹಾನ್ ಚೇತನಗಳಿಗೆ ಭವ್ಯ ನಮನ: ಅಂಬೇಡ್ಕರ್–ವಿಶ್ವಗುರು ಬಸವಣ್ಣ ಜಯಂತಿ ಆಚರಣೆ”. ವರದಿ:- ಅರುಣ್ ಕುಮಾರ್. ಎಸ್ (ದೊಡ್ಡ ಉಳ್ಳಾರ್ತಿ) ಚಳ್ಳಕೆರೆ :- ಸಂವಿಧಾನ ಶಿಲ್ಪಿ, ಜಗತ್ತು ಕಂಡ ಮಹಾನ್ ಜ್ಞಾನಿ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜಯಂತಿ ಹಾಗೂ ವಿಶ್ವಗುರು ಬಸವಣ್ಣನವರ 893 ನೇ ಜಯಂತಿ ಹಾಗೂ ದಿವಂಗತ ಡಿ.ಸುಧಾಕರ್ ರವರ ನುಡಿನಮನ ಕಾರ್ಯಕ್ರಮವನ್ನು ಚಳ್ಳಕೆರೆ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ನಗರಂಗೆರೆ ಗ್ರಾಮ ಪಂಚಾಯಿತಿ ಹಿತರಕ್ಷಣಾ ವೇದಿಕೆಮೂರ್ತಿ ಇಂಡಸ್ಟ್ರೀಸ್ ಅಂಡ್ ಡೆವೆಲಪ್ಪರ್ ಗ್ರೂಪ್ಸ್ […]
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಪರಿಸರ ಮಾಲಿನ್ಯಕ್ಕೆ ಕಡಿವಾಣ ಹಾಕಿ -ಜಿಲ್ಲಾ ನ್ಯಾಯಾಧೀಶ ಜಿ.ಡಿ.ಮಹಾವರ್ಕರ್

ಚಿತ್ರದುರ್ಗ(ಕರ್ನಾಟಕ ವಾರ್ತೆ).ಜೂ.05:ಆಧುನಿಕ ಜೀವನಶೈಲಿಗೆ ಒಗ್ಗಿಕೊಂಡಿರುವ ನಾವು ಸ್ವಚ್ಛಂದ ಜೀವನ ನಡೆಸಲು ಪ್ರಯತ್ನಿಸುತ್ತಿದ್ದೇವೆಯೇ ಹೊರತು, ಅದರಿಂದ ಪರಿಸರದ ಮೇಲಾಗುತ್ತಿರುವ ಹಾನಿಯ ಬಗ್ಗೆ ಯೋಚಿಸುತ್ತಿಲ್ಲ. ನಮ್ಮ ಸ್ವಾರ್ಥಕ್ಕಾಗಿ ಪರಿಸರ ಹಾಳುಗೆಡವುತ್ತಿರುವುದು ಆತಂಕಕಾರಿ ಸಂಗತಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಡಿ. ಮಹಾವರ್ಕರ್ ಕಳವಳ ವ್ಯಕ್ತಪಡಿಸಿದರು.ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅರಣ್ಯ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ‘ವಿಶ್ವ ಪರಿಸರ ದಿನಾಚರಣೆ’ ಅಂಗವಾಗಿ ಸಸಿ ನೆಡುವ […]
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ “ನಿಸರ್ಗ ಚಾರಿಟೇಬಲ್ ಟ್ರಸ್ಟ್” ಹಾಗೂ” ಡಾ. ಬಿಆರ್ ಅಂಬೇಡ್ಕರ್ ಕ್ರೀಡೆ ಮತ್ತು ಸಾಂಸ್ಕೃತಿಕ ಸಂಘ ಮತ್ತು ಜೆ ಸಿ ಬೋಸ್ ಇಕೋ ಕ್ಲಬ್ ಇವರ ಸಂಯುತ್ತಾ ಆಶಯದಲ್ಲಿ ಪಾಲವ್ನಹಳ್ಳಿ ಗ್ರಾಮದ ಶಾಲಾ ಆವರಣದಲ್ಲಿ ಪರಿಸರ ಜಾಗೃತಿ ಮತ್ತು ಸಸಿ ನೆಡೆಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಮುಖ್ಯ ಅತಿಥಿಗಳಾಗಿ ಪಿಡಿಒ ಬಸವರಾಜ್ ಡಾ. ಬಿ ಆರ್ ಅಂಬೇಡ್ಕರ್ ಮತ್ತು ಸಾಂಸ್ಕೃತಿಕ ಸಂಘ ಹಾಗೂ ನಿಸರ್ಗ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರು ನಾಗರಾಜ್ ಟಿ ಅಪಾರ ಮುಖ್ಯ ಶಿಕ್ಷಕರಾದ ರಂಗ ದೇವ್, ವೆಂಕಟೇಶ್, M R ರಾಮಚಂದ್ರಪ್ಪ ನಾಗೇಂದ್ರಪ್ಪ ಚಿದಾನಂದ್ ಹಾಗೂ ಊರಿನ ಪ್ರಮುಖ ಮುಖಂಡರು ಉಪಸ್ಥಿತಿ ಇದ್ದರು
ಪರಿಸರವು ಮಾನವನ ಜೀವ ನಾಡಿ – ನವನೀತ (ಪಿ.ಡಿ.ಒ) ಕರೆ

ವರದಿ:- ಅರುಣ್ ಕುಮಾರ್. ಎಸ್ ( ದೊಡ್ಡ ಉಳ್ಳಾರ್ತಿ) ಚಳ್ಳಕೆರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ದೊಡ್ಡ ಉಳ್ಳಾರ್ತಿ ಗ್ರಾಮದ ಸರ್ಕಾರಿ ಕನ್ನಡ ಮತ್ತು ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಹಮ್ಮಿಕೊಂಡಿದ್ದ ಹಸರೀಕರಣ ಹಾಗೂ ಗಿಡ ನೆಡುವ ಮೂಲಕ ಸಸಿಗೆ ನೀರೆರೆದು ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವನೀತ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಪಿಡಿಒ ನವನೀತ ರವರು, ಪರಿಸರ ಸಂರಕ್ಷಣೆ ಇಂದಿನ ಅತ್ಯಂತ ಪ್ರಮುಖ ಅಗತ್ಯವಾಗಿದ್ದು, ಹಸಿರೀಕರಣದ ಜೊತೆಗೆ ಪ್ಲಾಸ್ಟಿಕ್ ನಿರ್ಮೂಲನೆಗೂ ಸಾರ್ವಜನಿಕರು […]
ತೈಲ ಕಂಪನಿಗಳ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಜೂ.03:ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದಾಸ್ತಾನು ಸಮರ್ಪಕವಾಗಿದ್ದು, ಯಾವುದೇ ರೀತಿಯ ಇಂಧನ ಕೊರತೆ ಇಲ್ಲ. ಇಂಧನ ಪೂರೈಕೆ ಎಂದಿನಂತೆ ಸಹಜವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯಿಲ್ ಕಂಪನಿಗಳ ಅಧಿಕಾರಿಗಳು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇಂಧನದ ಅನಧಿಕೃತ ದಾಸ್ತಾನು ಇರಿಸುವುದು ಮತ್ತು ತಾತ್ಕಾಲಿಕ ಕೊರತೆ ಸೃಷ್ಠಿಸುವಂತಹ ಪ್ರಕರಣ ಕಂಡುಬಂದಲ್ಲಿ ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಸಂಬಂಧಪಟ್ಟ ನಿಯಮಗಳಡಿ […]
ಹಾಲು ಉತ್ಪಾದಕರೇ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು. ಹಾಲು ಉತ್ಪಾದನೆಯಲ್ಲಿ ರಾಜ್ಯ ದ್ವಿತೀಯ.ಬಿ.ಸಿ ಸಂಜೀವ ಮೂರ್ತಿ

ವರದಿ:- ಅರುಣ್ ಕುಮಾರ್.ಎಸ್ (ದೊಡ್ಡ ಉಳ್ಳಾರ್ತಿ) ಪ್ರತಿನಿತ್ಯ ಒಂದು ಕೋಟಿ ಲೀಟರ್ ಗೂ ಅಧಿಕ ಹಾಲು ಹಾಗೂ ಉತ್ಪಾದಿಸುವ ಕರ್ನಾಟಕ ಕ್ಷೀರ ಉತ್ಪಾದನೆಯಲ್ಲಿ ದೇಶದಲ್ಲಿ 2ನೇ ಸ್ಥಾನದಲ್ಲಿದೆ ಎಂದು ಶಿಮುಲ್ ನಿರ್ದೇಶಕ ಬಿ.ಸಿ ಸಂಜೀವಮೂರ್ತಿ ಹೇಳಿದರು. ನಗರದ ನಂದಿನಿ ಪಾರ್ಲರ್ ನಲ್ಲಿ ಶಿವಮೊಗ್ಗ ಹಾಲು ಒಕ್ಕೂಟದಿಂದ ಸೋಮವಾರ ಆಯೋಜಿಸಿದ್ದ ವಿಶ್ವ ಹಾಲು ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ ಜಗತ್ತಿನ ಒಟ್ಟಾರೆ ಉತ್ಪಾದನೆಯಲ್ಲಿ ಶೇ.27ರಷ್ಟು ಹಾಲು ಭಾರತದಲ್ಲಿ ಉತ್ಪಾದನೆಯಾಗುತ್ತದೆ. ದೇಶದಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದು ಕರ್ನಾಟಕ 2ನೇ ಸ್ಥಾನ ಪಡೆದಿದೆ, […]