ಕೋಟೆ ನಾಡಲ್ಲಿ ಮೊಳಗಿದ ಮಾದಕ ವಸ್ತು ವಿರೋಧಿ ಧ್ವನಿಬೃಹತ್ ಜಾಗೃತಿ ಜಾಥಾ : ವಿದ್ಯಾರ್ಥಿ ಹಾಗೂ ಪೊಲೀಸ್ ಪಡೆ ಭಾಗಿ

(ಚಿತ್ರದುರ್ಗ)ಜು.17:ಯುವ ಪೀಳಿಗೆಯನ್ನು ಬಲಿ ತೆಗೆದುಕೊಳ್ಳುತ್ತಿರುವ ಮಾದಕ ವಸ್ತುಗಳ ದುಷ್ಟ ಜಾಲದ ವಿರುದ್ಧ ಚಿತ್ರದುರ್ಗ ಜಿಲ್ಲಾ ಪೆÇಲೀಸ್ ಇಲಾಖೆ ಸಮರ ಸಾರಿದೆ. ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ಉದ್ದೇಶದಿಂದ ‘ಆಪರೇಷನ್ ರೈಸ್’ ಮತ್ತು ‘ಬೇಡ ಬ್ರೋ’ ಎಂಬ ವಿನೂತನ ಘೋಷಣೆಗಳೊಂದಿಗೆ ಬೃಹತ್ ಮಾದಕ ವಸ್ತು ವಿರೋಧಿಸಿ ಶುಕ್ರವಾರ ಜಾಗೃತಿ ಜಾಥಾವನ್ನು ನಡೆಸಲಾಯಿತು. ಜಾಥಾದಲ್ಲಿ ವಿದ್ಯಾರ್ಥಿಗಳು ಹಾಗೂ ಪೆÇಲೀಸ್ ಪಡೆಗಳು ಜೊತೆಯಾಗಿ ಹೆಜ್ಜೆ ಹಾಕಿದವು.ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು ಮದಕರಿ ನಾಯಕ ವೃತ್ತದಲ್ಲಿ ಹಸಿರು ನಿಶಾನೆ […]
ದಿಶಾ ಪ್ರಗತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಸದ ಗೋವಿಂದ ಎಂ ಕಾರಜೋಳ ಸೂಚನೆ

ಶಾಲಾ ಶೌಚಾಲಯ ದುರಸ್ತಿಗೆ ಆದ್ಯತೆ ನೀಡಿಶಾಲೆಗಳ ನಿರ್ವಹಣೆ ಸರಿಯಾಗಿಲ್ಲದಿದ್ದರೆ ಸಹಿಸಲ್ಲ ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ17:ಸರ್ಕಾರಿ ಶಾಲೆಗಳ ಶೌಚಾಲಯ ಹಾಗೂ ಕಟ್ಟಡಗಳ ಸಮರ್ಪಕ ನಿರ್ವಹಣೆ ಮಾಡದಿದ್ದರೆ ಕಠಿಣ ಕ್ರಮಕೈಕೊಳ್ಳಲಾಗುವುದು ಎಂದು ಸಂಸದ ಗೋವಿಂದ ಎಂ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ (ದಿಶಾ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಶಾಲೆಗಳಲ್ಲಿನ ಶೌಚಾಲಯಗಳ ನಿರ್ಮಾಣ, ದುರಸ್ತಿ ಹಾಗೂ ನಿರ್ವಹಣೆ […]
ರಂಗಭೂಮಿ ಸಮಾಜಕ್ಕೆ ಮೌಲ್ಯಾಧಾರಿತ ಬದುಕಿನ ದಾರಿ ತೋರಿಸುತ್ತದೆ: ಡಾ. ಜಿ.ಎನ್. ಮಲ್ಲಿಕಾರ್ಜುನಪ್ಪ

ಚಿತ್ರದುರ್ಗ, ಜುಲೈ 17: ಸಾಹಿತ್ಯ, ರಂಗಕಲೆ, ನಾಟಕ, ಕಾವ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ ನೀನಾಸಂ ಸಂಸ್ಥಾಪಕ ಕೆ.ವಿ. ಸುಬ್ಬಣ್ಣ ಅವರ ಬದುಕು ಮತ್ತು ಸಾಧನೆ ಇಂದಿನ ಪೀಳಿಗೆಗೆ ಆದರ್ಶವಾಗಿದೆ ಎಂದು ಶಿಕ್ಷಣ ತಜ್ಞ ಹಾಗೂ ನಾಟಕಕಾರ ಡಾ. ಜಿ.ಎನ್. ಮಲ್ಲಿಕಾರ್ಜುನಪ್ಪ ಹೇಳಿದರು. ನಗರದ ಶ್ರೀ ಸಿದ್ಧರಾಮೇಶ್ವರ ವಸತಿ ಪ್ರೌಢಶಾಲೆ ಆವರಣದಲ್ಲಿ ರಂಗಸೌರಭ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ನೀನಾಸಂ ಸಂಸ್ಥಾಪಕ ಸದಸ್ಯ, ಹಿರಿಯ ರಂಗಕರ್ಮಿ […]
ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಂಠಿತನೀರು ಬೇಡುವ ಬೆಳೆಗಳನ್ನು ಹಾಕದಿರಲು ರೈತರಿಗೆ ಮನವಿ

(ಚಿತ್ರದುರ್ಗ)ಜು.16:ಜಿಲ್ಲೆಯ ಜಲಾಶಯಗಳಿಗೆ ನೀರಿನ ಒಳಹರಿವು ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ಮುಂಬರುವ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ತಡೆಯಲು ರಾಷ್ಟ್ರೀಯ ಹಾಗೂ ರಾಜ್ಯ ಜಲನೀತಿಗಳನ್ವಯ ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಆದ್ಯತೆಯ ಮೇರೆಗೆ ಕುಡಿಯುವ ನೀರಿಗಾಗಿ ಮೀಸಲಿಡಲಾಗುತ್ತಿದೆ.ಜಾಗತಿಕ ‘ಎಲ್-ನಿನೋ’ ಪರಿಣಾಮದಿಂದಾಗಿ ಈ ಬಾರಿ ಮಳೆಯ ಕೊರತೆ ಉಂಟಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ರಾಜ್ಯದ ಹಲವೆಡೆ ಬರ ಪರಿಸ್ಥಿತಿ ತಲೆದೂರುವ ಸಾಧ್ಯತೆ ಇರುವುದರಿಂದ, “ಜಲಾಶಯ ನಂಬಿಕೊಂಡು ಯಾವ ರೈತರೂ ಬೆಳೆ ಹಾಕಬೇಡಿ” ಎಂದು […]
ಎಸ್ಐಆರ್ ಜಾಗೃತಿಗೆ ವಿಕಲಚೇತನರ ಬೈಕ್ ರ್ಯಾಲಿ

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಚಾಲನೆ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ವಿಕಲಚೇತನರ ಬೈಕ್ ರ್ಯಾಲಿ ಗಮನ ಸೆಳೆಯಿತು.ನಗರದ ಒನಕೆ ಓಬವ್ವ ವೃತ್ತದಿಂದ ಹೊರಟ ಬೈಕ್ ರ್ಯಾಲಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಒನಕೆ ಓಬವ್ವ ವೃತ್ತದಿಂದ ಆರಂಭಗೊಂಡ […]
ಎಸ್.ಐ.ಆರ್. : ಶೇ.61 ರಷ್ಟು ಗಣತಿ ನಮೂನೆಗಳ ಗಣಕೀಕರಣ: ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಮತದಾರರು ಭರ್ತಿ ಮಾಡಿ ಬಿ.ಎಲ್.ಓ ಗಳಿಗೆ ಮರಳಿ ನೀಡಿದ 8,79,154 ಗಣತಿ ನಮೂನೆಗಳನ್ನು ಗಣಕೀಕರಣ ಮಾಡಲಾಗಿದ್ದು, ಶೇ.61.03 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಜರುಗಿದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಉತ್ತಮವಾಗಿ ಜರಗುತ್ತಿದ್ದು, ಇದುವರೆಗೂ 14,40,534 ಮತದಾರ ಪೈಕಿ 14,39,849 ಮತದಾರರಿಗೆ ಗಣತಿ ನಮೂನೆಗಳನ್ನು […]
ವಿಕಲಚೇತನರ ಸಬಲೀಕರಣಕ್ಕೆ ಸಮಗ್ರ ದತ್ತಾಂಶ ಕ್ರೋಢೀಕರಣ ಅಗತ್ಯ -ವಿಧಾನ ಪರಿಷತ್ ಶಾಸಕ ವೈ.ಎಂ.ಸತೀಶ್

ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಅವರ 2025-26ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ 15 ಮಹಿಳಾ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ ವಿಕಲಚೇತನರಿಗೆ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ತಲುಪಬೇಕಾದರೆ, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಅವರ ನಿಖರವಾದ ಮಾಹಿತಿ ಸಂಗ್ರಹಿಸಿ ಸರ್ಕಾರಕ್ಕೆ ಸಲ್ಲಿಸುವುದು ಅತ್ಯಗತ್ಯ ಎಂದು ವಿಧಾನ ಪರಿಷತ್ ಶಾಸಕ ವೈ.ಎಂ. ಸತೀಶ್ ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಅವರ 2025-26ನೇ ಸಾಲಿನ […]
ಅಪಾರ್ಟ್ಮೆಂಟ್ ಮಾಲೀಕರಿಗೆ ಸಂಪೂರ್ಣ ಆಸ್ತಿ ಹಕ್ಕು; ಜನರ ಧ್ವನಿಯೇ ಸರ್ಕಾರದ ಧ್ವನಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಅಪಾರ್ಟ್ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ಸಂವಾದ; ಇ-ಖಾತಾ ಕ್ರಾಂತಿ, ಭೂ ಗ್ಯಾರಂಟಿ, ಬೆಂಗಳೂರಿನ ಅಭಿವೃದ್ಧಿ ಕುರಿತು ಮಹತ್ವದ ಘೋಷಣೆಗಳು ಬೆಂಗಳೂರು, ಜು.15 (ಕರ್ನಾಟಕ ವಾರ್ತೆ): ಅಪಾರ್ಟ್ಮೆಂಟ್ ಮಾಲೀಕರ ಹಕ್ಕುಗಳನ್ನು ರಕ್ಷಿಸುವುದು ಹಾಗೂ ಅವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. “ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗೇ ಸೇರಬೇಕು. ಜನರ ಧ್ವನಿಯೇ ಸರ್ಕಾರದ ಧ್ವನಿಯಾಗಬೇಕು” ಎಂದು ಅವರು ಸ್ಪಷ್ಟಪಡಿಸಿದರು. ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ)–2026 ಕರಡು ವಿಧೇಯಕ […]
ರೈತರ ಸಮ್ಮತಿ ಇಲ್ಲದೆ ಒಂದು ಗುಂಟೆ ಜಮೀನೂ ಸ್ವಾಧೀನವಿಲ್ಲ

ಬಿಡದಿ ಟೌನ್ಶಿಪ್ ಯೋಜನೆಗೆ ರೈತರ ಒಪ್ಪಿಗೆ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ಯೋಜನೆಯ ಸಾಧಕ-ಬಾಧಕಗಳ ಪರಿಶೀಲನೆಗೆ ಸಮಿತಿ ರಚನೆ; ಹಿಂದಿನ ಸರ್ಕಾರಗಳ ಯೋಜನೆಯನ್ನೇ ಮುಂದುವರಿಸುತ್ತಿದ್ದೇವೆ ಎಂದ ಸಿಎಂ ಬೆಂಗಳೂರು, ಜು.15 (ಕರ್ನಾಟಕ ವಾರ್ತೆ): ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ಉಂಟಾಗಿರುವ ಗೊಂದಲಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಸ್ಪಷ್ಟನೆ ನೀಡಿದ್ದು, ರೈತರ ಸಮ್ಮತಿ ಇಲ್ಲದೆ ಒಂದು ಗುಂಟೆ ಜಮೀನನ್ನೂ ಸರ್ಕಾರ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಖಚಿತ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ನಡೆದ […]
ಚಿತ್ರದುರ್ಗ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ಶಾಸಕ ಕೆ.ಸಿ ವಿರೇಂದ್ರ ಪಪ್ಪಿ

ಚಿತ್ರದುರ್ಗದ ಅಭಿವೃದ್ಧಿಗೆ ನಾಲ್ಕು ಮಹತ್ವಾಕಾಂಕ್ಷಿ ಯೋಜನೆಗಳಿಗೆ ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಮನವಿ ಚಿತ್ರದುರ್ಗ: ಚಿತ್ರದುರ್ಗ ನಗರದ ಸಮಗ್ರ ಅಭಿವೃದ್ಧಿ ಹಾಗೂ ಐತಿಹಾಸಿಕ ಪರಂಪರೆಯ ಸಂರಕ್ಷಣೆಗೆ ಸಂಬಂಧಿಸಿದ ನಾಲ್ಕು ಮಹತ್ವಾಕಾಂಕ್ಷಿ ಯೋಜನೆಗಳಿಗೆ ರಾಜ್ಯ ಸರ್ಕಾರ ವಿಶೇಷ ಅನುದಾನ ಮಂಜೂರು ಮಾಡಿ ಶೀಘ್ರ ಅನುಷ್ಠಾನಗೊಳಿಸಬೇಕೆಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಜುಲೈ 13 ರಂದು ಮುಖ್ಯಮಂತ್ರಿಗಳು ಚಿತ್ರದುರ್ಗಕ್ಕೆ ಆಗಮಿಸಿದ ವೇಳೆ ಚಿತ್ರದುರ್ಗ ಅಭಿವೃದ್ಧಿ ಹೇಗೆ […]