ಎರಡ್ಮೂರು ತಿಂಗಳಲ್ಲಿ ಐಮಂಗಲ ಕೆರೆಗಳಿಗೆ ಪ್ರಯೋಗಿಕ ನೀರು

ಜೆಜಿ ಹಳ್ಳಿಯಲ್ಲಿ ವಿ.ಜೆ. ಎನ್.ಎಲ್ ಮಾಜಿ ಎಂಡಿ. ಸಣ್ಣ ಚಿತ್ತಯ್ಯ ಹೇಳಿಕೆ ಹಿರಿಯೂರು : ತಾಲೂಕಿನ ಐಮಂಗಲ ಹೋಬಳಿಯ ಕನಿಷ್ಠ 10 ಕೆರೆಗಳಿಗೆ ಮುಂದಿನ ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳಲ್ಲಿ ಪ್ರಾಯೋಗಿಕವಾಗಿ ನೀರು ಹರಿಸಲಾಗುವುದು. ಮುಖ್ಯಮಂತ್ರಿಗಳ ಪರವಾಗಿ ನಾನು ವಾಗ್ದಾನ ಮಾಡುತ್ತೇನೆಂದು ವಿಶ್ವೇಶ್ವರಯ್ಯ ಜಲ ನಿಗಮದ ಮಾಜಿ ವ್ಯವಸ್ಥಾಪಕು ಹಾಗೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣ ಚಿತ್ತಯ್ಯ ಹೇಳಿದರು. ತಾಲೂಕಿನ ಜವನಗೊಂಡನಹಳ್ಳಿ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಾನು ಕೃಷಿಕ ಕುಟುಂಬದಿಂದ […]

ಉಪ ಚುನಾವಣೆ ಕಣದಿಂದ ಹಿಂದೆ ಸರಿಯುವ ಮಾತೇ ಇಲ್ಲ

ಅಭಿವೃದ್ಧಿ ಅಜೆಂಡಾ ಇಟ್ಟುಕೊಂಡು ಅಖಾಡಕ್ಕೆ ಇಳಿದಿದ್ದೇನೆ: ಬೊಮ್ಮನಹಳ್ಳಿ ಬಾಬು ಸ್ಪಷ್ಟನೆ” “ಹಿರಿಯೂರು ಕ್ಷೇತ್ರದಲ್ಲಿ ಅಭಿವೃದ್ಧಿಯ ಹೊಸ ಅಧ್ಯಾಯ ಆರಂಭಿಸುವ ಸಂಕಲ್ಪ” “ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಯಾವುದೇ ಒತ್ತಡಕ್ಕೂ ಮಣಿಯದೆ ಕೊನೆಯವರೆಗೂ ಕಣದಲ್ಲಿ ಇರುತ್ತೇನೆ. ಕ್ಷೇತ್ರದ ಜನರ ಆಶೀರ್ವಾದವೇ ನನ್ನ ಶಕ್ತಿ,” ಎಂದು ಪಕ್ಷೇತರ ಅಭ್ಯರ್ಥಿ ಬೊಮ್ಮನಹಳ್ಳಿ ಬಾಬು ಘೋಷಿಸಿದರು. ನಗರದ ಬೈಪಾಸ್ ರಸ್ತೆಯಲ್ಲಿರುವ ವೈಟ್ ವಾಲ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕ್ಷೇತ್ರದಲ್ಲಿ ವ್ಯಾಪಕ ಜನಸಂಪರ್ಕ ನಡೆಸುತ್ತಿದ್ದು, ಅಭ್ಯರ್ಥಿಯಾಗುವ ಉದ್ದೇಶದಿಂದ ಸಂಘಟನೆಯನ್ನು […]

ಕತ್ತಲಲ್ಲಿ ಕೈಚಳಕ… ಬೆಳಗಾಗುವಷ್ಟರಲ್ಲಿ ಪೊಲೀಸರ ಬಲೆಗೆ!

ಕಳ್ಳತನ ಪ್ರಕರಣ ಭೇದಿಸಿದ ಹಿರಿಯೂರು ಪೊಲೀಸರು : ಇಬ್ಬರು ಆರೋಪಿಗಳು ಅರೆಸ್ಟ್* ವರದಿ: ಪೊಲೀಸ್ ಬೇಟೆ ಪ್ರಸನ್ನ, ಹಿರಿಯೂರು, ಜು.4: ರಾತ್ರಿ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಹಿರಿಯೂರು ನಗರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರಿಂದ 138 ಗ್ರಾಂ ತೂಕದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಜೂನ್ 24ರ ರಾತ್ರಿ 10.45ರಿಂದ ಜೂನ್ 25ರ ಬೆಳಗಿನ ಜಾವ 5.45ರ ನಡುವಿನ ಅವಧಿಯಲ್ಲಿ, […]

ಮಳೆಗಾಗಿ ತಿಮ್ಮಪ್ಪನ ದೇವರ ಮೊರೆ ಹೋದ ಕೆ.ಕೆ.ಹಟ್ಟಿ ಗ್ರಾಮಸ್ಥರು

ಚಿತ್ರದುರ್ಗ: ಮುಂಗಾರು ಮಳೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಮಳೆಗಾಗಿ ಪ್ರಾರ್ಥಿಸಿ ಕೆ.ಕೆ.ಹಟ್ಟಿ ಗ್ರಾಮಸ್ಥರು ಉತ್ತರೆ ಬೆಟ್ಟದಲ್ಲಿರುವ ತಿಮ್ಮಪ್ಪನ ದೇವರ ದರ್ಶನಕ್ಕೆ ಪಾದಯಾತ್ರೆ ನಡೆಸಿ ವಿಶೇಷ ಪೂಜೆ ಸಲ್ಲಿಸಿದರು. ಭಾನುವಾರ ಬೆಳಗ್ಗೆ 9 ಗಂಟೆಗೆ ಕೆ.ಕೆ.ಹಟ್ಟಿಯಿಂದ ಆರಂಭವಾದ ಪಾದಯಾತ್ರೆಯಲ್ಲಿ ಗ್ರಾಮಸ್ಥರು ಮೊದಲು ಐತಿಹಾಸಿಕ ಮಾದಿಗನ ದೊಣ್ಣೆ ತಲುಪಿ, ಅಲ್ಲಿ ಗಂಗಾಸ್ಥಾನ ಪೂಜೆ ನೆರವೇರಿಸಿದರು. ಬಳಿಕ ದೇವರಿಗೆ ಇಷ್ಟವಾದ ನೈವೇದ್ಯವನ್ನು ತಯಾರಿಸಿ ಅರ್ಪಿಸಿದರು. ನಂತರ ಸುಮಾರು ನಾಲ್ಕು ಕಿಲೋಮೀಟರ್‌ಗಳಷ್ಟು ಪ್ರಕೃತಿ ಸೌಂದರ್ಯದಿಂದ ಕಂಗೊಳಿಸುವ ಬೆಟ್ಟದ ಮಾರ್ಗದಲ್ಲಿ ಯುವಕರು ಹಾಗೂ ಗ್ರಾಮಸ್ಥರು ಉತ್ಸಾಹದಿಂದ […]

ತಿಮ್ಮಪ್ಪನ ಬೆಟ್ಟದ ‘ಮಾದಿಗನ ದೊಣೆ’ – ಮೌಖಿಕ ಚರಿತ್ರೆಯ ಜೀವಂತ ಸಾಕ್ಷಿ

ತಿಮ್ಮಪ್ಪನ ಬೆಟ್ಟ. ಸದ್ಯ “ಮಾದಿಗನ ದೊಣೆ” ಬಗ್ಗೆ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕರೆ ಕೆಂಚಯ್ಯನ ಹಟ್ಟಿಯ ರೈತ ಮಹಾಂತೇಶ್ ಅವರು ಹೇಳಿದ ಕಥೆ ಮನಸ್ಸಿನಲ್ಲಿ ಅಚ್ಚೊತ್ತಿದಂತಾಗಿದೆ. “ನಮ್ಮ ತಾತ, ಅವರ ತಾತ, ಅವರ ತಾತನ ಮುತ್ತಾತ ಹೇಳುತ್ತಿದ್ದರು. ನಮಗೂ ಅಷ್ಟೇ ಗೊತ್ತು,” ಎಂದು ಅವರು ಆರಂಭಿಸಿದ ಆ ಕಥೆ, ಕೇವಲ ಒಂದು ಘಟನೆ ಅಲ್ಲ; ಅದು ಗ್ರಾಮೀಣ ಬದುಕಿನ ಮೌಖಿಕ ಇತಿಹಾಸದ ಜೀವಂತ ದಾಖಲೆಯಾಗಿದೆ. ಅವರು ಹೇಳುವಂತೆ, ಶತಮಾನಗಳ ಹಿಂದೆ ಈ ಭಾಗದಲ್ಲಿ ಭೀಕರ […]

ಅಜ್ಜಂಪುರದಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪರಿಶೀಲನೆ: ಶೀಘ್ರ ಪೂರ್ಣಗೊಳಿಸಲು ಸಚಿವರ ಸೂಚನೆ

ಅಜ್ಜಂಪುರ, ಜುಲೈ 5: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಲ್ಲಿ ಒಂದಾದ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳಿಗೆ ವೇಗ ನೀಡುವ ಉದ್ದೇಶದಿಂದ ಜಲಸಂಪನ್ಮೂಲ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ಅವರು ಇಂದು ಅಜ್ಜಂಪುರದಲ್ಲಿ ಯೋಜನೆಯ ಮುಖ್ಯ ಕಾಲುವೆಯ ವೈ-ಜಂಕ್ಷನ್ ಹಾಗೂ ಚಿತ್ರದುರ್ಗ ಶಾಖಾ ಕಾಲುವೆ ಪ್ಯಾಕೇಜ್-4ರ ಬಾಟಲ್ ನೆಕ್ ಕಾಮಗಾರಿಯನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮುಖ್ಯಮಂತ್ರಿಗಳ ಸೂಚನೆಯಂತೆ ನಡೆದ ಈ ಪರಿಶೀಲನಾ ಸಭೆಯಲ್ಲಿ ಕಾಮಗಾರಿಗಳ ಪ್ರಗತಿ, ಉಳಿದಿರುವ ಕಾರ್ಯಗಳು ಹಾಗೂ ಎದುರಾಗಿರುವ ತಾಂತ್ರಿಕ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ […]

ಭದ್ರಾ ಮೇಲ್ದಂಡೆ ಯೋಜನೆ : 2028 ವೇಳೆಗೆ ಸಿವಿಲ್ ಕಾಮಗಾರಿ ಪೂರ್ಣ

ಆಗಸ್ಟ್ ಅಂತ್ಯಕ್ಕೆ ಚಿತ್ರದುರ್ಗ ಶಾಖಾ ಕಾಲುವೆ ಪ್ರಾಯೋಗಿಕ ಚಾಲನೆ ‘ಭದ್ರಾ ಮೇಲ್ದಂಡೆ ಯೋಜನೆ’ ಕಾಮಗಾರಿಗಳಿಗೆ ವೇಗ ನೀಡಲಾಗಿದ್ದು, 2028ರ ಒಳಾಗಾಗಿ ಎಲ್ಲಾ ಸಿವಿಲ್ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ಯೋಜನೆಯ ಪ್ರಮುಖ ಅಂಗವಾದ ಚಿತ್ರದುರ್ಗ ಶಾಖಾ ಕಾಲುವೆಗೆ, ಭದ್ರಾ ಜಲಾಶಯದಲ್ಲಿ ನೀರಿನ ಲಭ್ಯತೆ ಆಧರಿಸಿ ಮುಂಬರುವ ಆಗಸ್ಟ್-2026 ವೇಳಗೆ ಪ್ರಾಯೋಗಿಕವಾಗಿ ನೀರನ್ನು ಹರಿಸಿ ಚಾಲನೆ ನೀಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಭಾನುವಾರ ಚಿತ್ರದುರ್ಗ ಶಾಖಾ ಕಾಲುವೆ ಗೋನೂರು ಅಕ್ವಾ ಡಕ್ಟ್ ಕಾಮಗಾರಿ ವೀಕ್ಷಿಸಿದ ಸಚಿವ ರಾಮಲಿಂಗಾರೆಡ್ಡಿ ಅವರು […]

ಜುಲೈ 05ರಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಜಿಲ್ಲಾ ಪ್ರವಾಸ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ04:ರಾಜ್ಯ ಜಲಸಂಪನ್ಮೂಲ ಸಚಿವರಾದ ರಾಮಲಿಂಗಾರೆಡ್ಡಿ ಅವರು ಇದೇ ಜುಲೈ 5ರಂದು ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.ಸಚಿವರ ಪರಿಷ್ಕøತ ಪ್ರವಾಸ ಕಾರ್ಯಕ್ರಮದನ್ವಯ ಜುಲೈ 05ರಂದು ಬೆಳಿಗ್ಗೆ 7ಕ್ಕೆ ಬೆಂಗಳೂರಿನಿಂದ ಹೊರಟು, ಮಧ್ಯಾಹ್ನ 12ಕ್ಕೆ ತರೀಕೆರೆ ಮಾರ್ಗ ಮಧ್ಯೆದಲ್ಲಿ ಭದ್ರಾ ಜಲಾಶಯ ಮತ್ತು ಭದ್ರಾ ಮೇಲ್ದಂಡೆ ಯೋಜನೆ ಇನ್‍ಟೇಕ್ ಕಾಮಗಾರಿ ಪರಿವೀಕ್ಷಣೆ ಮಾಡುವರು. ಮಧ್ಯಾಹ್ನ 1ಕ್ಕೆ ಭದ್ರಾ ಜಲಾಯಶದಿಂದ ಹೊರಟು, ಮಧ್ಯಾಹ್ನ 1.30ಕ್ಕೆ ತರೀಕೆರೆ-ಕಡೂರು ಕೆರೆ ತುಂಬಿಸುವ ಯೋಜನೆಯ ಪಂಪ್ ಹೌಸ್-2 ಕಾಮಗಾರಿ ಪರಿವೀಕ್ಷಣೆ […]

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026: ಮನೆ-ಮನೆ ಭೇಟಿ ಕಾರ್ಯಕ್ಕೆ ವೇಗ

ಚಿತ್ರದುರ್ಗ, ಜುಲೈ 4:ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision–2026) ಅಂಗವಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಮನೆ-ಮನೆ ಭೇಟಿ ಕಾರ್ಯವು ಜೂನ್ 30ರಿಂದ ಜುಲೈ 29, 2026ರವರೆಗೆ ನಡೆಯುತ್ತಿದ್ದು, ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು (BLO) ಮತದಾರರ ಮನೆಗಳಿಗೆ ಭೇಟಿ ನೀಡಿ ಗಣತಿ ನಮೂನೆಗಳ ವಿತರಣಾ ಕಾರ್ಯವನ್ನು ಆರಂಭಿಸಿದ್ದಾರೆ. ಜುಲೈ 4ರ ವೇಳೆಗೆ ಜಿಲ್ಲೆಯ 1,661 ಮತಗಟ್ಟೆಗಳಲ್ಲಿ ಒಟ್ಟು 14,40,534 ಮತದಾರರ ಪೈಕಿ 11,10,708 ಮತದಾರರಿಗೆ ಗಣತಿ ನಮೂನೆಗಳನ್ನು […]